ಸಂಗ್ರಹ ಚಿತ್ರ 
ರಾಜ್ಯ

ಡಿಜಿಟಲ್ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ: ಇನ್ನು ಮುಂದೆ 5 ದಿನಗಳಲ್ಲೇ ಸಿಗಲಿದೆ ಎಸ್ಎಸ್ಎಲ್'ಸಿ ನಕಲಿ ಅಂಕಪಟ್ಟಿ!

ಎಸ್ಎಸ್ಎಲ್'ಸಿ ನಕಲಿ ಅಂಕಪಟ್ಟಿ ಪಡೆಯಲು ಇನ್ನುಮುಂದೆ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ನೇರವಾಗಿ ತೆರಳಿ ಅರ್ಜಿ ಸಲ್ಲಿಸಿ, ತಿಂಗಳಾನುಗಟ್ಟಲೇ ಕಾಯಬೇಕಿಲ್ಲ. ಐದು ದಿನಗಳಲ್ಲೇ ನಕಲಿ ಅಂಕಪಟ್ಟಿ ನೀಡಲು ಶಿಕ್ಷಣ ಇಲಾಖೆ ಕ್ರಮಗಳನ್ನು ಕೈಗೊಂಡಿದೆ. 

ಬೆಂಗಳೂರು: ಎಸ್ಎಸ್ಎಲ್'ಸಿ ನಕಲಿ ಅಂಕಪಟ್ಟಿ ಪಡೆಯಲು ಇನ್ನುಮುಂದೆ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ನೇರವಾಗಿ ತೆರಳಿ ಅರ್ಜಿ ಸಲ್ಲಿಸಿ, ತಿಂಗಳಾನುಗಟ್ಟಲೇ ಕಾಯಬೇಕಿಲ್ಲ. ಐದು ದಿನಗಳಲ್ಲೇ ನಕಲಿ ಅಂಕಪಟ್ಟಿ ನೀಡಲು ಶಿಕ್ಷಣ ಇಲಾಖೆ ಕ್ರಮಗಳನ್ನು ಕೈಗೊಂಡಿದೆ. 

ಇದಕ್ಕಾಗಿ ಶಿಕ್ಷಣ ಇಲಾಖೆ ಡಿಜಿಟಲ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಆನ್'ಲೈನ್ ಮೂಲಕವೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ದಾಖಲೆಗಳನ್ನು ನೀಡಬಹುದಾಗಿದೆ. ಅರ್ಜಿ ಸಲ್ಲಿಸಿದ ಕೇವಲ 5 ದಿನಗಳಲ್ಲೇ ವಿದ್ಯಾರ್ಥಿಗೆ ನಕಲಿ ಅಂಕಪಟ್ಟಿ ಸಿಗಲಿದೆ. 

ಈ ಮೊದಲು ಜನರು ಸ್ವತಃ ಶಿಕ್ಷಣ ಮಂಡಳಿಗೆ ತೆರಳಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಿತ್ತು. ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಈ ಅರ್ಜಿಗಳು ತಲುಪಲು ತಿಂಗಳಾನುಗಟ್ಟಲೆ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ತತ್ಕಾಲ್ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಆನ್'ಲೈನ್ ಮೂಲಕವೇ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಆನ್'ಲೈನ್ ಮೂಲಕ ಅಥವಾ ಬ್ಯಾಂಕ್ ಇನ್ನಿತರೆ ವ್ಯವಸ್ಥೆಗಳ ಮೂಲಕ ಹಣವನ್ನು ಪಾವತಿ ಮಾಡಬಹುದಾಗಿದೆ. ಬಳಿಕ ವಿದ್ಯಾರ್ಥಿಗಳು ತಾವು ಸಲ್ಲಿಸಿದ ಅರ್ಜಿಯ ಪ್ರತಿಯನ್ನು ತಮ್ಮ ಶಾಲೆಗಳ ಮುಖ್ಯಸ್ಥರಿಗೆ ಸಲ್ಲಿಸಬೇಕಿದೆ. ಇದಾದ ಬಳಿಕ ಐದು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗಲಿದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಆನ್'ಲೈನ್ ಮೂಲಕವೇ ಶಾಲಾ ಮುಖ್ಯಸ್ಥರು, ಬಿಇಒ ಹಾಗೂ ಡಿಡಿಪಿಐ ಹಂತದಲ್ಲಿ ಪರಿಶೀಲನೆಗಳು ನಡೆಯಲಿವೆ. ಅರ್ಜಿ ಸಲ್ಲಿಸಿದ ಐದು ದಿನಗಳಲ್ಲಿ ಅಂಕಪಟ್ಟಿಯನ್ನು ಶಾಲೆಯ ಮುಖ್ಯಸ್ಥರ ಕಚೇರಿಗೆ ತಲುಪಲಿದೆ. ಒಂದು ವೇಳೆ ತುರ್ತಾಗಿ ಬೇಕಿರದವರಿಗೆ ಅಂಕಪಟ್ಟಿಗಳು 30 ದಿನಗಳಲ್ಲಿ ಸಿಗಲಿದೆ. ಒಬ್ಬ ವಿದ್ಯಾರ್ಥಿ ನಾಲ್ಕು ಬಾಕಿ ನಕಲಿ ಅಂಕಪಟ್ಟಿಯನ್ನು ಪಡೆಬಹುದಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ, 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ಗಳ ರೋಚಕ ಜಯ; 3-1 ಸರಣಿ ಗೆಲುವು

Load shedding In bangalore: ಡಿ.20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆ ವರೆಗೂ ವಿದ್ಯುತ್ ಕಡಿತ

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!

SCROLL FOR NEXT