ರಾಜ್ಯ

ಐಎಂಎ ಹಗರಣ: ಇಬ್ಬರು ಸೇವಾನಿರತ ಐಪಿಎಸ್ ಅಧಿಕಾರಿಗಳು ಸೇರಿದಂತೆ 28 ಮಂದಿ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

ಸುಮಾರು 4 ಸಾವಿರ ಕೋಟಿ ರೂಪಾಯಿ ಮೊತ್ತದ ಐಎಂಎ ಹಗರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ತನಿಖಾ ಸಂಸ್ಥೆ 28 ಆರೋಪಿಗಳ ವಿರುದ್ಧ ನಗರದ ನಿಗದಿತ ನ್ಯಾಯಾಲಯದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಿದೆ.

ಬೆಂಗಳೂರು: ಸುಮಾರು 4 ಸಾವಿರ ಕೋಟಿ ರೂಪಾಯಿ ಮೊತ್ತದ ಐಎಂಎ ಹಗರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ತನಿಖಾ ಸಂಸ್ಥೆ 28 ಆರೋಪಿಗಳ ವಿರುದ್ಧ ನಗರದ ನಿಗದಿತ ನ್ಯಾಯಾಲಯದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಿದೆ.

ಆರೋಪಿಗಳ ಪಟ್ಟಿಯಲ್ಲಿ ಇಬ್ಬರು ಸೇವಾನಿರತ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಹೆಚ್ಚುವರಿ ಪೊಲೀಸ್ ಆಯುಕ್ತ, ಕರ್ನಾಟಕ ಪೊಲೀಸ್ ಮೀಸಲು ಪಡೆಯ ಎಸ್ಪಿ ಅಜಯ್ ಹಿಲೊರಿ ಕೂಡ ಇದ್ದಾರೆ.

ಇನ್ನು ಆರೋಪ ಪಟ್ಟಿಯಲ್ಲಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಂ ರಮೇಶ್, ಅದೇ ಠಾಣೆಯ ಸಬ್ ಇನ್ಸ್ ಪೆಕ್ಟರ್ ಗೌರಿ ಶಂಕರ್ , ಅಂದಿನ ಉಪ ಎಸ್ಪಿ ಇ ಬಿ ಶ್ರೀಧರ್, ಐಎಂಎಯ ಎಂಡಿ ಮತ್ತು ಸಿಇಒ ಮೊಹಮ್ಮದ್ ಮನ್ಸೂರ್ ಖಾನ್, ಬೆಂಗಳೂರು ಉತ್ತರ ಭಾಗದ ಅಂದಿನ ಸಹಾಯಕ ಆಯುಕ್ತರು ಎಲ್ ಸಿ ನಾಗರಾಜ್, ಕೆಲವು ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು ಈ ಹಗರಣದಲ್ಲಿ ಭಾಗಿಯಾಗಿವೆ ಎಂದು ಆರೋಪಪಟ್ಟಿಯಲ್ಲಿ ನಮೂದಿಸಲಾಗಿದೆ.

ಆರೋಪಿಗಳ ವಿರುದ್ಧ ಸೂಕ್ತ ಕ್ರಮವನ್ನು ಇದುವರೆಗೆ ತೆಗೆದುಕೊಂಡಿಲ್ಲ, ಬದಲಿಗೆ ಅವರಿಗೆ ಕ್ಲೀನ್ ಚಿಟ್ ನೀಡಿ ಐಎಂಎ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಆರೋಪವನ್ನು ಮುಚ್ಚಿ ಹಾಕಲು ಶಿಫಾರಸು ಮಾಡಲಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಯಶಸ್ಸು ಗೌತಮ್ ಗಂಭೀರ್ ಮೇಲೆ ಒತ್ತಡ ಹೇರಲಿದೆ: RCB ಮಾಜಿ ಬ್ಯಾಟರ್ ಡಿವಿಲಿಯರ್ಸ್

'ನಾಚಿಕೆಯಾಗಬೇಕು ನಿಮಗೆ'; ಯುವಕರಿಂದಲೇ ನಾವು ಸ್ಟಾರ್‌ ಆಗಿರೋದು: Gen-Z ವಿರುದ್ಧ ಕಂಗನಾ ಹೇಳಿಕೆಗೆ ಸೋನು ಸೂದ್ ಆಕ್ರೋಶ

ನಾಳೆ ಮುಂಜಾನೆ 4.15ರ ಬ್ರಹ್ಮ ಮುಹೂರ್ತದಲ್ಲಿ 'Ramayana' ಟ್ರೇಲರ್ ಬಿಡುಗಡೆ!

ರಾಜ್ಯದಲ್ಲಿ SIR ಶಾಕ್! ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಡಿಲೀಟ್; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು- ಚುನಾವಣಾ ಆಯೋಗ; Video