ಪ್ರಸನ್ನಾನಂದ ಸ್ವಾಮೀಜಿ 
ರಾಜ್ಯ

ಬೇಡಿಕೆ ಈಡೇರಿಸದಿದ್ದರೆ ಕಾಂಗ್ರೆಸ್-ಜೆಡಿಎಸ್ ಸ್ಥಿತಿ ನಿಮಗೂ ಕಟ್ಟಿಟ್ಟ ಬುತ್ತಿ: ಬಿಜೆಪಿಗೆ ಸ್ವಾಮೀಜಿ ಎಚ್ಚರಿಕೆ

ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ: ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರವು ವಾಲ್ಮೀಕಿ ಸಮುದಾಯಕ್ಕೆ 7.5 ರಷ್ಟು ಮೀಸಲಾತಿಯನ್ನು ಹೆಚ್ವಳ ಮಾಡಿದೆ. ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಜಸ್ಟಿಸ್ ನಾಗಮೋಹನದಾಸ ಅವರ ಕಮಿಟಿ ರಚಿಸಿ.‌ ಜು.2 ರಂದು ವರದಿ ನೀಡಿದೆ. ನಮ್ಮಸಮುದಾಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ 7.5 ಕ್ಕೆ ಹೆಚ್ವಿಸಲು ಸರ್ಕಾರಕ್ಕೆ ಒತ್ತಾಯವನ್ನು ಮಾಡಲು ರಾಯಚೂರು ಮತ್ತು
‌ಬಳ್ಳಾರಿ ಜಿಲ್ಲಾ ಮಟ್ಟದ ಸಭೆ‌ ಮಾಡಲಾಗುತ್ತಿದೆ ನಂತರ ಹೊರಾಟ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ 24 ಜಿಲ್ಲೆಯಲ್ಲಿ ಸಂಚಾರ ಮಾಡುತ್ತೇವೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಯಾವುದೇ ಹಂತದ ಹೋರಾಟಕ್ಕೂ ನಮ್ಮ ಸಮಾಜ ಸಿದ್ಧವಾಗಿದೆ ಹೋರಾಟ ಕೈಗೆತ್ತಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಸಚಿವ ಸಂಪುಟ ಕರೆದು ಕೇಂದ್ರದ ಮಾದರಿ ಜಾರಿಗೆ‌ ತರಲಿ.ಎಸ್ಸಿ, ಎಸ್ಟಿಗೆ ಸೇರಲು ಸಂವಿಧಾನದ ಅಡಿ ಹೋರಾಟ ಮಾಡುತ್ತಿದ್ದಾರೆ ಕೇಳುವುದು ತಪ್ಪು ಅಲ್ಲ. ಕೇಂದ್ರದ ವಿವೇಚನೆ ಗೆ ಬಿಟ್ಟ ವಿಚಾರ ಎಂದು ಹೇಳಿದರು. ನಮ್ಮ ಮೀಸಲಾತಿ ಹೆಚ್ಚಳ ಮಾಡಲಿ ಬಿಜೆಪಿಯ ಮುಖಂಡರ,ಶಾಸಕರಾದ ರಮೇಶ್ ಜಾರಕಿಹೊಳಿ‌, ಶ್ರೀರಾಮುಲು ನೇತೃತ್ವದಲ್ಲಿ ಸಭೆ ಮಾಡಿ ಸಿಎಂ ಭೇಟಿಯಾಗಿದ್ದೇವೆ. ವಿಳಂಬ ಮಾಡಿದ್ದರಿಂದ ಪುನಃ ಸಭೆ ಸೇರಿ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ನಮ್ಮ ಸಮಾಜಕ್ಕೆ ಡಿಸಿಎಂ ಹುದ್ದೆ ಕೊಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ಅವರು ಈಡೇರಿಸಬೇಕು, ಭವಿಷ್ಯದಲ್ಲಿ ನಾವು ನಮ್ಮ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT