ಪ್ರಸನ್ನಾನಂದ ಸ್ವಾಮೀಜಿ 
ರಾಜ್ಯ

ಬೇಡಿಕೆ ಈಡೇರಿಸದಿದ್ದರೆ ಕಾಂಗ್ರೆಸ್-ಜೆಡಿಎಸ್ ಸ್ಥಿತಿ ನಿಮಗೂ ಕಟ್ಟಿಟ್ಟ ಬುತ್ತಿ: ಬಿಜೆಪಿಗೆ ಸ್ವಾಮೀಜಿ ಎಚ್ಚರಿಕೆ

ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ: ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರವು ವಾಲ್ಮೀಕಿ ಸಮುದಾಯಕ್ಕೆ 7.5 ರಷ್ಟು ಮೀಸಲಾತಿಯನ್ನು ಹೆಚ್ವಳ ಮಾಡಿದೆ. ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಜಸ್ಟಿಸ್ ನಾಗಮೋಹನದಾಸ ಅವರ ಕಮಿಟಿ ರಚಿಸಿ.‌ ಜು.2 ರಂದು ವರದಿ ನೀಡಿದೆ. ನಮ್ಮಸಮುದಾಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ 7.5 ಕ್ಕೆ ಹೆಚ್ವಿಸಲು ಸರ್ಕಾರಕ್ಕೆ ಒತ್ತಾಯವನ್ನು ಮಾಡಲು ರಾಯಚೂರು ಮತ್ತು
‌ಬಳ್ಳಾರಿ ಜಿಲ್ಲಾ ಮಟ್ಟದ ಸಭೆ‌ ಮಾಡಲಾಗುತ್ತಿದೆ ನಂತರ ಹೊರಾಟ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ 24 ಜಿಲ್ಲೆಯಲ್ಲಿ ಸಂಚಾರ ಮಾಡುತ್ತೇವೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಯಾವುದೇ ಹಂತದ ಹೋರಾಟಕ್ಕೂ ನಮ್ಮ ಸಮಾಜ ಸಿದ್ಧವಾಗಿದೆ ಹೋರಾಟ ಕೈಗೆತ್ತಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಸಚಿವ ಸಂಪುಟ ಕರೆದು ಕೇಂದ್ರದ ಮಾದರಿ ಜಾರಿಗೆ‌ ತರಲಿ.ಎಸ್ಸಿ, ಎಸ್ಟಿಗೆ ಸೇರಲು ಸಂವಿಧಾನದ ಅಡಿ ಹೋರಾಟ ಮಾಡುತ್ತಿದ್ದಾರೆ ಕೇಳುವುದು ತಪ್ಪು ಅಲ್ಲ. ಕೇಂದ್ರದ ವಿವೇಚನೆ ಗೆ ಬಿಟ್ಟ ವಿಚಾರ ಎಂದು ಹೇಳಿದರು. ನಮ್ಮ ಮೀಸಲಾತಿ ಹೆಚ್ಚಳ ಮಾಡಲಿ ಬಿಜೆಪಿಯ ಮುಖಂಡರ,ಶಾಸಕರಾದ ರಮೇಶ್ ಜಾರಕಿಹೊಳಿ‌, ಶ್ರೀರಾಮುಲು ನೇತೃತ್ವದಲ್ಲಿ ಸಭೆ ಮಾಡಿ ಸಿಎಂ ಭೇಟಿಯಾಗಿದ್ದೇವೆ. ವಿಳಂಬ ಮಾಡಿದ್ದರಿಂದ ಪುನಃ ಸಭೆ ಸೇರಿ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ನಮ್ಮ ಸಮಾಜಕ್ಕೆ ಡಿಸಿಎಂ ಹುದ್ದೆ ಕೊಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ಅವರು ಈಡೇರಿಸಬೇಕು, ಭವಿಷ್ಯದಲ್ಲಿ ನಾವು ನಮ್ಮ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT