ನಾಗರಹೊಳೆ ಅಭಯಾರಣ್ಯದಲ್ಲಿ ಜಿಂಕೆ 
ರಾಜ್ಯ

ನಾಗರಹೊಳೆ ಮೂಲಕ ಹಾದುಹೋಗುವ ವಾಹನಗಳಿಗೆ 'ಟೈಮ್ ಟಿಕೆಟ್': ವನ್ಯಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ ಕ್ರಮ

ಲಾಕ್ ಡೌನ್ ಸಡಿಲಿಕೆಯಾಗುತ್ತಾ ಬಂದಂತೆ ರಸ್ತೆಗಳಲ್ಲಿ ವಾಹನಗಳ ಓಡಾಟ, ಜನಸಂಚಾರ ಹೆಚ್ಚಾಗಿದೆ. ಕೊರೋನಾ ಪೂರ್ವ ಜನಜೀವನಕ್ಕೆ ಮರಳುತ್ತಿದ್ದಾರೆ.

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾಗುತ್ತಾ ಬಂದಂತೆ ರಸ್ತೆಗಳಲ್ಲಿ ವಾಹನಗಳ ಓಡಾಟ, ಜನಸಂಚಾರ ಹೆಚ್ಚಾಗಿದೆ. ಕೊರೋನಾ ಪೂರ್ವ ಜನಜೀವನಕ್ಕೆ ಮರಳುತ್ತಿದ್ದಾರೆ.

ನಗರ ಪ್ರದೇಶಗಳ ರಸ್ತೆಗಳು ಮಾತ್ರವಲ್ಲದೆ ಅರಣ್ಯ ಪ್ರದೇಶಗಳ ರಸ್ತೆಗಳಲ್ಲಿ ಕೂಡ ವಾಹನಗಳ ಓಡಾಟ, ದಟ್ಟಣೆ ಹೆಚ್ಚಾಗಿದ್ದು ಅರಣ್ಯ ಪ್ರದೇಶಗಳಲ್ಲಿ ಸಹ ಹಲವು ಅಪಘಾತಗಳಾಗುತ್ತಿವೆ.

ಅರಣ್ಯ ಪ್ರದೇಶಗಳಲ್ಲಿ ಅಭಯಾರಣ್ಯಗಳ ಸುತ್ತಮತ್ತ ಜನರ, ವಾಹನಗಳ ಓಡಾಟವನ್ನು ನಿಯಂತ್ರಿಸಲು, ಕಾಡುಪ್ರಾಣಿಗಳು ಅಜಾಗರೂಕತೆಯಿಂದ ವಾಹನ ಓಡಿಸುವ ಚಾಲಕರಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಕರ್ನಾಟಕ ಅರಣ್ಯ ಇಲಾಖೆ ನಾಗರಹೊಳೆ ಹುಲಿ ಅಭಯಾರಣ್ಯದ ಮೂಲಕ ಹಾದುಹೋಗುವ ವಾಹನಗಳ ಬಗ್ಗೆ ಕಣ್ಣಿಟ್ಟಿದೆ. ಅರಣ್ಯ ರಸ್ತೆಗಳಲ್ಲಿ ಹಾದುಹೋಗುವ ವಾಹನಗಳ ವೇಗವನ್ನು ತಪಾಸಣೆ ಮಾಡಲು ಸಮಯಾಧಾರಿತ ಸ್ಯಾಂಪ್ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಮೊದಲ ಲಾಕ್ ಡೌನ್ ಹೇರಿಕೆಯಾದ ನಂತರ ನಾಗರಹೊಳೆ ಅಭಯಾರಣ್ಯ ಸಿಬ್ಬಂದಿ ವಾಹನಗಳ ಓಡಾಟವನ್ನು ಪರಿಶೀಲಿಸುತ್ತಿದ್ದಾರೆ. ನಂತರ 11 ಪ್ರಾಣಿಗಳು ಆನೆಚೌಕ ಮತ್ತು 8 ಪ್ರಾಣಿಗಳು ಹುಣಸೂರಿನಲ್ಲಿ ಮೃತಪಟ್ಟಿವೆ. ಹೀಗಾಗಿ ಹುಣಸೂರು-ಗೋಣಿಕೊಪ್ಪ ಹೆದ್ದಾರಿಯಲ್ಲಿ ವಾಹನಗಳ ಓಡಾಟದ ಬಗ್ಗೆ ಸಿಬ್ಬಂದಿಗಳು ತಪಾಸಣೆ ಮಾಡುತ್ತಿದ್ದಾರೆ. ಇಲ್ಲಿ ಅಲ್ಲೂರು ಗೇಟ್, ಪೆರಿಯಪಟ್ನ-ಗೋಣಿಕೊಪ್ಪ ಮೂಲಕ ಬೂದಿತಿಟ್ಟು ಗೇಟ್ ಆಗಿ ವಾಹನಗಳು ಚಲಿಸುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel