ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ, ನಾಲ್ವರು ಪೊಲೀಸ್ ವಶಕ್ಕೆ

ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರು ಮೂಲದ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಬೆಂಗಳೂರಿಗೆ ಕರೆತಂದು ಅವರನ್ನು ಸಂಪೂರ್ಣವಾಗಿ ವಿಚಾರಣೆ ನಡೆಸಿದ ಬಳಿಕವೇ ಮುಂದಿನ ಕ್ರಮ‌ ಜರುಗಿಸಲಾಗುವುದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಈ ನಾಲ್ವರು ಸಂಬಂಧಿಕರಾಗಿದ್ದು, ಆಸ್ತಿ ಹಂಚಿಕೆ ಸಂಬಂಧ ಮನಸ್ತಾಪವಿತ್ತು. ಅದೇ ಕಾರಣಕ್ಕೆ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಅವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು ಎಂದು ತಿಳಿದು ಬಂದಿದೆ. ಆದರೂ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಬೇಕು. ಅವಾಗಲೇ ನಿಜಾಂಶ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೀರೋಯಿನ್‍ಗಳಿಗೆ ಜಾಮೀನು ನೀಡಬೇಕು. ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವವರು ಅಮಾಯಕರು. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಇಲ್ಲದಿದ್ದರೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಸಿಬಿ ಮುಖ್ಯಸ್ಥ ಸಂದೀಪ್‍ಪಾಟೀಲ್, ಎನ್ ಡಿಪಿಎಸ್ ವಿಶೇಷ ನ್ಯಾಯಾಧೀಶ ಸೀನಪ್ಪ ಅವರ ಕಾರು ಸ್ಫೋಟಿಸಿ ಹತ್ಯೆ ಮಾಡುವುದಾಗಿ ಸಿಟಿ ಸಿವಿಲ್ ಕೋರ್ಟ್‍ಗೆ ಜೀವಂತ ಡಿಟೋನೇಟರ್‍ನೊಂದಿಗೆ ಆರೋಪಿಗಳು ಪತ್ರ ರವಾನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT