ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ತಡೆಯೊಡ್ಡಬೇಕು: ಕುಮಾರಸ್ವಾಮಿ

ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ  ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬೆಂಗಳೂರು: ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಎಗ್ಗಿಲ್ಲದೆ ದಂಡ ವಸೂಲಿ ಮಾಡುವ ಪೊಲೀಸರ ಕ್ರಮದಿಂದ ಚಾಲಕರು ನಲುಗಿ ಹೋಗಿದ್ದಾರೆ. ಇಂತಹ ಕಡು ಕಷ್ಟ ಕಾಲದಲ್ಲಿ ಸರ್ಕಾರ ಮಾನವೀಯತೆ ಪ್ರದರ್ಶಿಸಬೇಕೆಂದು ಆಗ್ರಹಿಸಿದ್ದಾರೆ.

ಕೋವಿಡ್-19 ವೇಳೆ ಸಂಕಟಕ್ಕೆ ಒಳಗಾಗಿದ್ದ ಚಾಲಕರಿಗೆ 5 ಸಾವಿರ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಸರ್ಕಾರ ಚಾಲಕರ ಮೂಗಿಗೆ ತುಪ್ಪ ಸುರಿಯುವ ಕೆಲಸ ಮಾಡಿತ್ತು. ಆದರೆ, ಅನುಷ್ಠಾನಕ್ಕೆ ಬರಲಿಲ್ಲ. ಚಾಲಕರಿಗೆ ಪರಿಹಾರ ಕೊಡದೆ ಮಾತು ತಪ್ಪಿದ ಸರ್ಕಾರ ಈಗ ದಂಡ ವಸೂಲಿಯ ನೆಪದಲ್ಲಿ ಚಾಲಕರ ಜೀಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಪೊಲೀಸರಿಗೆ ದಂಡ ವಸೂಲಿಗೆ ಟಾರ್ಗೆಟ್ ನೀಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ, ಎಲ್ಲಾ ದಾಖಲಾತಿಗಳನ್ನು ತೋರಿಸಿದರೂ ಒಂದಲ್ಲಾ ಒಂದು ಕಾನೂನು ತಗಾದೆ ತೆಗೆದು ಚಾಲಕರನ್ನು ಹಗಲು ದರೋಡೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT