ರಾಜ್ಯ

ಮೈಸೂರು: ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ, ಮೊಮ್ಮಗಳು ಬಚಾವ್

Raghavendra Adiga

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗೂ ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೃಷ್ಟವಶಾತ್ ಮೊಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಮೃತರನ್ನು ಅಕ್ಕಮ್ಮ(60), ರಶ್ಮಿ (35) ಎಂದು ಗುರುತಿಸಲಾಗಿದ್ದು, ಅಕ್ಕಮ್ಮನ ಮೊಮ್ಮಗಳು ಮಿಂಚುವನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.

ರಶ್ಮಿ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ಡಿಸಿಸಿ ಬ್ಯಾಂಕ್ ಉದ್ಯೋಗಿಯಾಗಿದ್ದರು. ಆಕೆಯು ತಾಯಿ ಅಕ್ಕಮ್ಮ ಮತ್ತು ಮಗಳು ಮಿಂಚು ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮೂವರೂ ಒಟ್ಟಿಗೆ ತೋಳುಗಳಿಗೆ ಬಟ್ಟೆ ಬಿಗಿದುಕೊಂಡು ನದಿಗೆ ಹಾರಿದ್ದಾರೆ. 

ಆತ್ಮಹತ್ಯೆ ನಿರ್ಧಾರಕ್ಕೆ ನಿಖರ ಕಾರಣವೇನೆಂದು ಪತ್ತೆಯಾಗಿಲ್ಲ. ಈ ಸಂಬಂಧ ನಂಜನಗೂಡು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

SCROLL FOR NEXT