ಸಿಎಂ ಯಡಿಯೂರಪ್ಪ 
ರಾಜ್ಯ

ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ, ಹೆಚ್ಚಿನ ಹಣ ಬಿಡುಗಡೆ ಭರವಸೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ಹಲವು ಮನೆಗಳು ಬಿದ್ದಿವೆ. ಇದರ ಬಗ್ಗೆ ಮಾಹಿತಿ ಪಡೆಯಲು ವೈಮಾನಿಕ ಸಮೀಕ್ಷೆ ನಡೆಸಲು ತೆರಳುತ್ತಿದ್ದೇವೆ. ಈಗಾಗಲೇ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಹೆಚ್ಚಿನ ಹಣವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗುವುದು ತಕ್ಷಣ ಜನರ ಸಮಸ್ಯೆಗೆ ಸ್ಪಂದಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳ ಸಭೆಯ ಬಳಿಕ ಸಿಎಂ ತಿಳಿಸಿದ್ದಾರೆ.

ಸಮೀಕ್ಷೆಯ ಬಳಿಕ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಬಳಿಕ ಕೇಂದ್ರ ತಂಡ ಬರಬಹುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೆರೆಪೀಡಿತ ಪ್ರದೇಶದ ವೀಕ್ಷಣೆ ಮಾಡಿದ ನಂತರ ಯಡಿಯೂರಪ್ಪ ಕಲಬುರ್ಗಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿಯೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾನಿಯ ಮಾಹಿತಿ ನೀಡಿದರು. ಜಂಟಿ ಸರ್ವೆ ನಂತರ ಹಾನಿಯ ನಿಖರ ಮಾಹಿತಿ ಸಿಗಲಿದ್ದು, ಎನ್.ಡಿ.ಆರ್.ಎಫ್. ನಿಯಮದ ಅಡಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಿಎಂ ಯಡಿಯೂರಪ್ಪ ಅವರು ವಿಜಯಪುರ ಜಿಲ್ಲೆಯಲ್ಲೂ ಇಂದು ವೈಮಾನಿಕ ಸಮೀಕ್ಷೆ ನಡೆಸಬೇಕಾಗಿತ್ತು. ಆದರೆ ಹೆಲಿಕ್ಯಾಪ್ಟರ್​ ಹಾರಾಟಕ್ಕೆ ಪ್ರತಿಕೂಲ ಹವಾಮಾನ ಇಲ್ಲದ ಕಾರಣ ಸಮೀಕ್ಷೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸಿಎಂ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT