ವಿಧಾನಸೌಧ 
ರಾಜ್ಯ

ವಿಧಾನಸೌಧದಲ್ಲಿ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗಳಿಗೆ ಸರ್ಕಾರ ಸುತ್ತೋಲೆ

ಬೀದಿಗಳಲ್ಲಿ ಜನರು ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ,‌ ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್​ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದು, ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.

ಬೆಂಗಳೂರು: ಬೀದಿಗಳಲ್ಲಿ ಜನರು ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ,‌ ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್​ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದು, ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಹೀಗಾಗಿ ಇನ್ನು ಮುಂದೆ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗಳಿಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಸಿಬ್ಬಂದಿಗಳಿಗೆ ಎರಡು ಸುತ್ತೋಲೆಗಳನ್ನು ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು, ಮೊದಲ ಸುತ್ತೋಲೆಯಲ್ಲಿ ಕಟ್ಟಡದ ಮೇಲಿನ ಮಹಡಿಗಳಿಂದ ಕೆಳಕ್ಕೆ ಕಸ ಎಸೆಯದಂತೆ ಸೂಚಿಸಿದೆ. 

ಕೊರೋನಾ ಸಾಂಕ್ರಾಮಿಕ ರೋಗ ರಾಜ್ಯದಲ್ಲಿ ತಲೆದೋರಿದ್ದು, ಇಂತಹ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡುವುದು ಅತ್ಯಂತ ಮುಖ್ಯವಾಗಿದೆ. ಕೆಲ ಸಿಬ್ಬಂದಿಗಳು ಹೂಗುಚ್ಛ, ಬಾಟಲಿ, ಪ್ಲಾಸ್ಟಿಕ್ ಕಪ್, ಕವರ್ ಸೇರಿದಂತೆ ಇತರೆ ವಸ್ತುಗಳನ್ನು ಕಟ್ಟಡದ ಮೇಲಿನ ಮಹಡಿಗಳಿಂದ ಎಸೆಯುತ್ತಿದ್ದಾರೆ. ಇನ್ನು ಕೆಲವರು ಪಕ್ಷಗಳಿಗಾಗಿ ಕಿಟಕಿಗಳಲ್ಲಿ ಆಹಾರಗಳನ್ನಿಡುತ್ತಿದ್ದಾರೆ. ಇದರಿಂದ ವಿಧಾನಸೌಧದ ಸುತ್ತಮುತ್ತಲಿನ ಸ್ವಚ್ಛತೆ ಹಾಳಾಗುತ್ತಿದೆ. ಅಲ್ಲದೆ, ಇಲಿಗಳು ಹಾಗೂ ಜಿರಳೆಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದೆ. 

ಮತ್ತೊಂದು ಸುತ್ತೋಲೆಯಲ್ಲಿ ಆಯುಧ ಪೂಜೆ ಸಮಯದಲ್ಲಿ ಕಚೇರಿಗಳ ಒಳಗೆ ಮತ್ತು ಕಾರಿಡಾರ್ ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ ಬಳಸುವುದರಿಂದ ಹಾನಿಕಾರಕ ಬಣ್ಣ ನೆಲಹಾಸಿನ ಮೇಲೆ ಬಿದ್ದು ತಿಂಗಳುಗಳ ಕಾಲ ಹಾಗೆಯೇ ನೆಲಹಾಸಿನ ಮೇಲೆ ಅಂಟಿಕೊಳ್ಳುವುದರಿಂದ ನೆಲಹಾಸಿನ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತಿದೆ. ಈ ಕುರಿತು ಹಿಂದೆಯೇ ಸುತ್ತೋಲೆ ಹೊರಡಿಸಿದರೂ ಅನೇಕ ಇಲಾಖೆಗಳು ಪಾಲನೆ ಮಾಡುತ್ತಿಲ್ಲ. ಆಯುಧ ಪೂಜೆ ಸಂದರ್ಭದಲ್ಲಿ ಕುಂಬಳಕಾಯಿಗೆ ರಸಾಯನಿಕಯುಕ್ತ ಬಣ್ಣ ಹಾಗೂ ರಸಾಯನಿಕಯುಕ್ತ ಬಣ್ಣದ ರಂಗೋಲಿಯನ್ನು ಬಳಸದಂತೆ ಸೂಚಿಸಲಾಗಿದೆ. ಅಲ್ಲದೇ ಪೂಜೆಯ ದಿನವೇ ದೀಪಗಳನ್ನು ನಂದಿಸುವಂತೆ ಸೂಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT