ಯಡಿಯೂರಪ್ಪ 
ರಾಜ್ಯ

ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ: ಮುಖ್ಯಮಂತ್ರಿ ಯಡಿಯೂರಪ್ಪ

ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿನೇರ ಬಂಡವಾಳ (ಎಫ್‌ಡಿಐ) ಆಕರ್ಷಿಸಿದೆ. ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ, ಭಾರತದ ಮೊದಲ ವಲಯ-ನಿರ್ದಿಷ್ಟ 3,540 ಕೋಟಿ ರೂ. ಹೂಡಿಕೆಯಾಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಸರಕುಗಳ ಕ್ಲಸ್ಟರ್ ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ. ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತ್ ಪರಿಕಲ್ಪನೆಗೆ ಅನುಗುಣವಾಗಿ, ಇಲ್ಲಿ ವಿಶ್ವದರ್ಜೆಯ ಸೌಲಭ್ಯ ಲಭ್ಯವಾಗಲಿದ್ದು, 20 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ತಿಳಿಸಿದರು. ಅಭಿವೃದ್ಧಿಗೆ ಪೂರಕವಾಗಿರುವ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಕರ್ನಾಟಕ ಪ್ರೋತ್ಸಾಹಿಸುತ್ತಲೇ ಬಂದಿದೆ.

ನಗರ ಚಲನಶೀಲತೆ, ಉಪಗ್ರಹ ತಂತ್ರಜ್ಞಾನ, ಸಾವಯವ ಕೃಷಿ, ಆಗ್ಮೆಂಟೆಡ್ ರಿಯಾಲಿಟಿ ಮೊದಲಾದ ವಿಭಿನ್ನ ಕಾರ್ಯಕ್ಷೇತ್ರಗಳಲ್ಲಿ ಕರ್ನಾಟಕದ 15 ನವೋದ್ಯಮಗಳು ರಾಷ್ಟ್ರೀಯ ನವೋದ್ಯಮ ಪ್ರಶಸ್ತಿ ಗೆದ್ದಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!