ಹೈಕೋರ್ಟ್ 
ರಾಜ್ಯ

ಕೋವಿಡ್-19 ಸುರಕ್ಷತಾ ನಿಯಮಗಳ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹೈಕೋರ್ಟ್

ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್-19 ಸುರಕ್ಷತಾ ನಿಯಮಗಳ ಉಲ್ಲಂಘಿಸುವವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ಗುರುವಾರ ಹೇಳಿದೆ. 

ಬೆಂಗಳೂರು: ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್-19 ಸುರಕ್ಷತಾ ನಿಯಮಗಳ ಉಲ್ಲಂಘಿಸುವವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ಗುರುವಾರ ಹೇಳಿದೆ. 

ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35 ಪ್ರತಿಭಟನೆಗಳು ನಡೆದಿವೆ. ಮಾಸ್ಕ್ ಧರಿಸಬೇಕು, ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ ಇಲ್ಲಿ ಪಾಲನೆಯೇ ಆಗಿಲ್ಲ. ಈ ರೀತಿಯ ಪ್ರತಿಭಟನೆಗಳನ್ನು ನಿರ್ಬಂಧಿಸಬೇಕು ಎಂದು ಕೋರಿ ಸಾಯಿದತ್ತ ಸಲ್ಲಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಸೆಪ್ಟೆಂಬರ್ 25ರಂದು ನಡೆದ ಪ್ರತಿಭಟನೆ ಆಯೋಜಕರಲ್ಲಿ ಒಬ್ಬರಾದ ಹೋರಾಟಗಾರ ಮಾರುತಿ ಮಾನ್ಪಡೆ ಕೋವಿಡ್‌ನಿಂದ ಮೃತಪಟ್ಟಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.

‘ಪ್ರತಿಭಟನೆಯ ಚಿತ್ರಗಳನ್ನು ನೋಡಿದರೆ ಮಾಸ್ಕ್ ಧರಿಸದ ಹಲವರು ಕಾಣಿಸುತ್ತಾರೆ. ಅಂತರ ಕಾಪಾಡಬೇಕು ಎಂಬ ನಿಯಮ ಸಂಪೂರ್ಣ ಉಲ್ಲಂಘನೆಯಾಗಿದೆ. ಇದು ಕೋವಿಡ್ ಹರಡಲು ಕಾರಣವಾಗಿದೆ. ಈ ರೀತಿಯ ಉಲ್ಲಂಘನೆ ತಡೆಯಲು ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಪ್ರಾಧಿಕಾರಿಗಳು ದೊಡ್ಡದಾಗಿ ಕಾರ್ಯಾಚರಣೆಗೆ ಇಳಿಯಬೇಕು. ನಿಯಮ ಪಾಲಿಸದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯ ಪೀಠ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!