ಸಾಂಕೇತಿಕ ಚಿತ್ರ 
ರಾಜ್ಯ

ಟಿಎನ್ಐಇ ಇಂಪ್ಯಾಕ್ಟ್: ಮೈಸೂರಿನ ಹೆಚ್ ಡಿ ಕೋಟೆಯಲ್ಲಿ ಬಾಲಕಿಯ ಬಾಲ್ಯ ವಿವಾಹಕ್ಕೆ ತಡೆ

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಯ ಸಮಯಪ್ರಜ್ಞೆಯಿಂದ ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಕುಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ವಿವಾಹ ತಪ್ಪಿಹೋದ ಪ್ರಸಂಗ ನಡೆದಿದೆ.

ಬೆಂಗಳೂರು: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಯ ಸಮಯಪ್ರಜ್ಞೆಯಿಂದ ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಕುಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ವಿವಾಹ ತಪ್ಪಿಹೋದ ಪ್ರಸಂಗ ನಡೆದಿದೆ.

ಹೆಚ್ ಡಿ ಕೋಟೆ ತಾಲ್ಲೂಕಿನ ಹುಂಗಲ್ಲಿ ಗ್ರಾಮದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯನ್ನು ಆಕೆಯ ಮನೆಯವರು ಬಲವಂತದಿಂದ ಮದುವೆ ಮಾಡಿಸಲು ಮುಂದಾಗಿದ್ದರು. ಈ ವೇಳೆ ಒಬ್ಬರು ವಿಷಯವನ್ನು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದರು. ಆಗ ಪತ್ರಿಕೆ ಪ್ರತಿನಿಧಿ ವಿಷಯವನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮತ್ತು ಪೊಲೀಸರ ಗಮನಕ್ಕೆ ತಂದರು.

ಡಿಸಿಪಿಒ ದಿವಾಕರ್ ಅವರು ಡಿಸಿಪಿ ಘಟಕ ಮತ್ತು ಅಂಗನವಾಡಿ ಸಿಬ್ಬಂದಿಯನ್ನು ಗ್ರಾಮಕ್ಕೆ ಕಳುಹಿಸಿ ನೋಡಿದಾಗ ಕುಟುಂಬಸ್ಥರು ಮೈಸೂರಿನ ಬೊಗಾಡಿಗೆ ಹೋಗಿರುವುದು ತಿಳಿಯಿತು. ವಿಶೇಷ ಬಾಲಾಪರಾಧ ಪೊಲೀಸ್ ಘಟಕ ಮತ್ತು ಇತರ ತಂಡ ಕುಟುಂಬಸ್ಥರನ್ನು ಪತ್ತೆ ಮಾಡಲು ಮುಂದಾಯಿತು. ಕೊನೆಗೂ ಹೆಚ್ ಡಿ ಕೋಟೆ ಪೊಲೀಸರು ಬಾಲಕಿಯ ತಂದೆ ಕೃಷ್ಣೆ ಗೌಡ ಅವರನ್ನು ಪತ್ತೆ ಹಚ್ಚಿದರು. ಮದುವೆಯನ್ನು ನಿಲ್ಲಿಸಲಾಯಿತು. ಬಾಲಕಿಯ ನಿಶ್ಚಿತಾರ್ಥ ಮಾತ್ರ ಮಾಡಲು ಮುಂದಾಗಿದ್ದೆವಷ್ಟೆ ಎಂದು ಬಾಲಕಿಯ ತಂದೆ ಹೇಳುತ್ತಾರೆ. ಕೊನೆಗೆ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟರು.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಪ್ರತಿನಿಧಿ ಕೃಷ್ಣೆ ಗೌಡರನ್ನು ಸಂಪರ್ಕಿಸಿದಾಗ, ನನ್ನ ಸೋದರಿಯ ಮಗನ ಜೊತೆಗೆ ಬಾಲಕಿಯ ನಿಶ್ಚಿತಾರ್ಥ ಮಾತ್ರ ಮಾಡಲು ನಿಶ್ಚಯಿಸಿದ್ದೆವಷ್ಟೆ. ಈಗಲೇ ಮದುವೆ ಮಾಡುವ ಯೋಜನೆಯಿರಲಿಲ್ಲ. 18 ವರ್ಷಕ್ಕಿಂತ ಮೊದಲು ಮದುವೆ ಮಾಡುವುದು ಕಾನೂನುಬದ್ಧವಲ್ಲ ಎಂದು ಗೊತ್ತಿದೆ. ನಾನು ಪೊಲೀಸ್ ಸ್ಟೇಷನ್ ಗೆ ಹೋಗಿ ನನ್ನ ಮಗಳ ಮದುವೆಗೆ ಬಲವಂತ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಬಂದಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT