ರಾಜ್ಯ

ಹಾವೇರಿ: ಶಾಲಾ ಆವರಣದಲ್ಲಿನ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವು

Raghavendra Adiga

ಹಾವೇರಿ: ಶಾಲಾ ಕಾಮಗಾರಿಗಾಗಿ ತೋಡಿದ್ದ ಗುಂಡಿಯೊಂದಕ್ಕೆ ಬಿದ್ದು ಮೂವರು ಮಕ್ಕಳು ದಾರುಣ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ನಡೆದಿದೆ. 

ಬ್ಯಾಡಗಿಯ ಸರ್ಕಾರಿ ಉರ್ದು ಶಾಲೆಯ ಆವರಣದಲ್ಲಿ ನಡೆದ ಘಟನೆಯಲ್ಲಿ ಆಟವಾಡುತ್ತಿದ್ದ ಮಕ್ಕಳು ಕೊಠಡಿ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ವಾರದ ಕಾಲ ಸುರಿದ ಮಳೆಯ ಕಾರಣ ಗುಂಡಿಗಳು ನೀರಿನಿಂದ ತುಂಬಿತ್ತು ಎನ್ನಲಾಗಿದೆ.

ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆ ಗ್ರಾಮಸ್ಥರೇ ಮಕ್ಕಳ ಶವಗಳನ್ನು ಹೊರತೆಗೆದಿದ್ದಾರೆ. 

ಗುತ್ತಿಗೆದಾರರ ನಿರ್ಲಕ್ಷ ಅನಾಹುತಕ್ಕೆ ಕಾರಣ ಎನ್ನಲಾಗಿದ್ದು ಸ್ಥಳೀಯರು ಪುರಸಭೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

SCROLL FOR NEXT