ದತ್ತಾತ್ರೇಯ ಲೇಔಟ್ ನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್'ಡಿಆರ್ಎಫ್ ಪಡೆ 
ರಾಜ್ಯ

ಭಾರೀ ಮಳೆಗೆ ಬೆಚ್ಚಿಬಿದ್ದ ಬೆಂಗಳೂರು: ಕಳೆದ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ

ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಸುರಿದ ಭಾರೀ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 

ಬೆಂಗಳೂರು: ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಸುರಿದ ಭಾರೀ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 

ಹೊಸಕೆರೆಹಳ್ಳಿಯಲ್ಲಿ ವೃಷಭಾವತಿ ಕಾಲುವೆಗೆ ಸಂಪರ್ಕಿಸುವ ಬೃಹತ್ ರಾಜಕಾಲುವೆಯ ಕಾಮಗಾರಿಗಾಗಿ ನೀರಿನ ದಿಕ್ಕನ್ನು ಬದಲಿಸಲಾಗಿದ್ದು, ಇಡೀ ಅವಘಡಕ್ಕೆ ಇದೇ ಕಾರಣವೆಂದು ಹೇಳಲಾಗುತ್ತಿದೆ. ನೀರಿನ ದಿಕ್ಕನ್ನು ಬದಲಿಸಿದ ಪರಿಣಾಮ ಭಾರೀ ಪ್ರಮಾಣದ ನೀರು ಒಮ್ಮೆಲೆ ನುಗ್ಗಿ ಬಂದಿದೆ. ಪರಿಣಾಮ ರಾಜಕಾಲುವೆ ಸಮೀಪದ ಮನೆಗಳು, ಕಟ್ಟಡಗಳು ಜಲಾವೃತಗೊಂಡವು. ಈ ಭಾಗದಲ್ಲಿ ಅಂದಾಜು 350ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಹ ಪರಿಸ್ಥಿತಿಎದುರಾಗಿತ್ತು. 

ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ಹಿಂಭಾಗದ ರಾಜಕಾಲುವೆ ಪಕ್ಕದ ರಸ್ತೆಯಲ್ಲೇ ನದಿಯಂತೆ ರಭಸವಾಗಿ ನೀರು ಹರಿದ ಪರಿಣಾಮ ಮಾರುತಿ ಸ್ವಿಫ್ಟ್ ಕಾರೊಂದು ಕೊಚ್ಚಿಕೊಂಡು ಹೋಯಿತು. ದತ್ತಾತ್ರೇಯನಗರ ಒಂದರಲ್ಲೇ 300ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. 

ಇಲ್ಲಿನ ಬಡಾವಣೆಗಳ ಮನೆ, ಅಪಾರ್ಟ್'ಮೆಂಟ್ ಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡಿದರು. ಹೊಸಕೆರೆಹಳ್ಳಿಯಲ್ಲಿ ಜನರು ಕಟ್ಟಡಗಳ ಮೇಲೆ ಆಶ್ರಯ ಪಡೆದಿದ್ದರು. ನೆಲಮಹಡಿಯಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ತಂಡ ಹಾಗೂ ಎಸ್'ಡಿಆರ್ಎಫ್ ಸಿಬ್ಬಂದಿ ಬೋಟ್ ಮೂಲಕ ರಕ್ಷಣೆ ಮಾಡಿದರು, ಹೊಸಕೆರೆಹಳ್ಳಿ ದತ್ತಾತ್ರೇಯ ದೇವಾಲಯವೂ ಮುಳುಗಿದೆ. 

ಅ.21 ರಂದು ಸುರಿದ ಮಳೆಯಿಂದಾಗಿ ಹೊಸಕೆರೆಹಳ್ಳಿ ಗುರುದತ್ತ ಲೇಔಟ್ನಲ್ಲಿ ರಾಜಕಾಲುವೆ ಕುಸಿದು ಅವಾಂತರ ಸೃಷ್ಟಿಯಾಗಿತ್ತು. 

ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಕೋರಮಂಗಲ 4ನೇ ಬ್ಲಾಕ್, ಸಿಟಿ ಬೆಡ್ ಬಾಸ್ಕರ್ ರಾವ್ ಪಾರ್ಕ್ ಹಾಗೂ ಶ್ರೀಕಂಠೇಶ್ವರ ಪಾರ್ಕ್ ಸುತ್ತಮುತ್ತಲ ರಸ್ತೆಗಳು ಹಾಗೂ ಮನೆಗಳು ಜಲಾವೃತವಾಗಿ ಸವಾರರು ಹಾಗೂ ನಿವಾಸಿಗಳು ಪರದಾಡಿದರು. 

ಬನಶಂಕರಿ 2ನೇ ಹಂತ, ಎಲ್ಐಸಿ ಕಾಲೋನಿ 1ನೇ ಕ್ರಾಸ್, ಐಐಟಿ ಬಡಾವಣೆ, ಕೋರಮಂಗಲ 4 ನೇ ಬ್ಲಾಕ್, ಜೆಪಿ ನಗರ 6 ನೇ ಹಂತ, ಅರೆಕೆಂಪನಹಳ್ಳಿ ವಾರ್ಡ್, ಹೊಸಕೆರಹಳ್ಳಿ, ದತ್ತಾತ್ರೇಯಲೇಔಟ್, ಕತ್ರಿಗುಪ್ಪೆ ವಿಠಲನಗರ, ವಸಂತಪುರ,ಆರ್ಆರ್ ನಗರ, ಜೆಸಿ ನಗರ, ಕೆ.ಆರ್ ಮಾರುಕಟ್ಟೆ, ಜೆ.ಸಿ.ರಸ್ತೆ, ಕಾಳಿದಾಸ ವೃತ್ತ, ಬೊಮ್ಮನಹಳ್ಳಿಯ ಸಾಕಷ್ಟು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT