ಕುಸಿದು ಬಿದ್ದಿರುವ ಗೋಡೆ 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ: ಗವಿ ಗಂಗಾಧರೇಶ್ವರ ದೇಗುಲದ ಬಳಿ ಗೋಡೆ ಕುಸಿತ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿದು ಬಿದ್ದಿದೆ. 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿದು ಬಿದ್ದಿದೆ. 

ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾರೀ ಮಳೆಯಿಂದ ಭಾಗಶಃ ಕುಸಿದು ಬಿದ್ದು, ದೇಗುಲದ ಆವರಣ ಗೋಡೆಗಳಿಗೂ ಕೂಡ ಭಾಗಶಃ ಹಾನಿಯುಂಟಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ವಪರೆಗೆ ರಾಜ್ಯದ ಉತ್ತರ ಭಾಗ, ಕರಾವಳಿ ಹಾಗೂ ಮಲೆನಾಡನ್ನು ಮುಳುಗಿಸಿದ್ದ ಮಳೆ ಇದೀಗ ರಾಜಧಾನಿಯನ್ನೂ ಮುಳುಗಿಸಿದೆ. ಶುಕ್ರವಾರ ಗುಡುಗು-ಸಿಡಿಲಿನೊಂದಿಗೆ ವರುಣ ಸೃಷ್ಟಿಸಿದ್ದ ಆರ್ಭಟಕ್ಕೆ ನವರಾತ್ರಿಯ 7ನೇ ದಿನವಾದ ಕಾಳರಾತ್ರಿಯು ನೈಋತ್ಯ ಹಾಗೂ ದಕ್ಷಿಣ ಬೆಂಗಳೂರು ಜನತೆಗೆ ಕರಾಳ ರಾತ್ರಿಯಾಗಿ ಬದಲಾಗಿದೆ. 

ನಗರದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಮಳೆಯಿಂದಾಗಿ ಯಾವುದೇ ಪ್ರಾಣಹಾನಿಗಳಾಗಿರುವ ವರದಿಯಾಗಿಲ್ಲ. ಆದರೆ, ಸುಮಾರು 780 ಮನೆಗಳು ಮುಳುಗಿವೆ ಎಂದು ಬಿಬಿಎಂಪಿ ಅಂದಾಜಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನಾವಿಕರ ಹತ್ಯೆ: ಅಮೆರಿಕಾ ಆದೇಶಗಳ ಪಾಲಿಸುವ 'obedient servant': ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಭಾರತೀಯ ನಾವಿಕರ ಸಾವು: ‘ವಾಣಿಜ್ಯ ಹಡಗುಗಳ ಮೇಲಿನ ದಾಳಿ ನ್ಯಾಯಸಮ್ಮತವಲ್ಲ’; ಅಮೆರಿಕಾಗೆ ಭಾರತ ಖಡಕ್‌ ಸಂದೇಶ, ರಾಜತಾಂತ್ರಿಕ ಸಂಘರ್ಷ ಉಲ್ಬಣ

ಬೆಂಗಳೂರು ಅಭಿವೃದ್ಧಿ ಖಾತೆ ಹಗ್ಗಜಗ್ಗಾಟ: ಅಧಿಕಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ಅಧಿಕಾರ ಸ್ವೀಕಾರ: ಕೃಷ್ಣ ಬೈರೇಗೌಡ

ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆ

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ; 2 ದಿನದಲ್ಲಿ 2,764 ಪಾಸ್ ವಿತರಣೆ

SCROLL FOR NEXT