ಕುಸಿದು ಬಿದ್ದಿರುವ ಗೋಡೆ 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ: ಗವಿ ಗಂಗಾಧರೇಶ್ವರ ದೇಗುಲದ ಬಳಿ ಗೋಡೆ ಕುಸಿತ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿದು ಬಿದ್ದಿದೆ. 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿದು ಬಿದ್ದಿದೆ. 

ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾರೀ ಮಳೆಯಿಂದ ಭಾಗಶಃ ಕುಸಿದು ಬಿದ್ದು, ದೇಗುಲದ ಆವರಣ ಗೋಡೆಗಳಿಗೂ ಕೂಡ ಭಾಗಶಃ ಹಾನಿಯುಂಟಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ವಪರೆಗೆ ರಾಜ್ಯದ ಉತ್ತರ ಭಾಗ, ಕರಾವಳಿ ಹಾಗೂ ಮಲೆನಾಡನ್ನು ಮುಳುಗಿಸಿದ್ದ ಮಳೆ ಇದೀಗ ರಾಜಧಾನಿಯನ್ನೂ ಮುಳುಗಿಸಿದೆ. ಶುಕ್ರವಾರ ಗುಡುಗು-ಸಿಡಿಲಿನೊಂದಿಗೆ ವರುಣ ಸೃಷ್ಟಿಸಿದ್ದ ಆರ್ಭಟಕ್ಕೆ ನವರಾತ್ರಿಯ 7ನೇ ದಿನವಾದ ಕಾಳರಾತ್ರಿಯು ನೈಋತ್ಯ ಹಾಗೂ ದಕ್ಷಿಣ ಬೆಂಗಳೂರು ಜನತೆಗೆ ಕರಾಳ ರಾತ್ರಿಯಾಗಿ ಬದಲಾಗಿದೆ. 

ನಗರದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಮಳೆಯಿಂದಾಗಿ ಯಾವುದೇ ಪ್ರಾಣಹಾನಿಗಳಾಗಿರುವ ವರದಿಯಾಗಿಲ್ಲ. ಆದರೆ, ಸುಮಾರು 780 ಮನೆಗಳು ಮುಳುಗಿವೆ ಎಂದು ಬಿಬಿಎಂಪಿ ಅಂದಾಜಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಗೊಂದಲ: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯಗೆ ಕಾಂಗ್ರೆಸ್ ಶಾಕ್‌; ಸಚಿವರ ಪಟ್ಟಿಯಲ್ಲಿ ಹೆಸರು ಇದ್ದರೂ ಕೈತಪ್ಪಿದ ಮಂತ್ರಿಗಿರಿ..!

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಇಂದು ಸಂಜೆ 4.05 ಕ್ಕೆ ಪ್ರಮಾಣವಚನ ಕಾರ್ಯಕ್ರಮ, ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ…

ಸಂಪುಟ ವಿಸ್ತರಣೆಯ ಬೆನ್ನಲ್ಲೇ ವಿಧಾನಸಭೆಗೆ ಸ್ಪೀಕರ್​​, ಪರಿಷತ್ತಿಗೆ​​ ಸಭಾಪತಿ ಹೆಸರು ಪ್ರಕಟಿಸಿದ AICC

ಸಂಪುಟ ವಿಸ್ತರಣೆಯಲ್ಲಿ ಭಾರೀ ಟ್ವಿಸ್ಟ್; ಸಿದ್ದು ಸಂಪುಟದ 12 ಸಚಿವರಿಗೆ ಕೊಕ್; ಹಿರಿಯರಿಗೂ ಕೈತಪ್ಪಿದ ಸಚಿವ ಸ್ಥಾನ..!

ಬೆಂಗಳೂರು ದಕ್ಷಿಣ ಜಿಲ್ಲೆ: ಮುಖ್ಯಮಂತ್ರಿ ಸ್ಥಾನದ ಜೊತೆಗೆ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣಗೆ ಒಲಿದ ಸಚಿವ ಸ್ಥಾನ!