ಸಂಗ್ರಹ ಚಿತ್ರ 
ರಾಜ್ಯ

ಆರೋಗ್ಯ ಕಾರ್ಯಕರ್ತರಿಗೆ ಮೊದಲು ಕೊರೋನಾ ಲಸಿಕೆ: ಭರದಿಂದ ಸಾಗುತ್ತಿದೆ ಪೂರೈಕೆಗೆ ಸರ್ಕಾರದ ಸಿದ್ಧತೆ!

ಕೊರೋನಾ ವೈರಸ್'ಗೆ ಲಸಿಕೆ ಬಂದ ಕೂಡಲೇ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆಯನ್ನು ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. 

ಬೆಂಗಳೂರು: ಕೊರೋನಾ ವೈರಸ್'ಗೆ ಲಸಿಕೆ ಬಂದ ಕೂಡಲೇ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆಯನ್ನು ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. 

ಈ ಕುರಿತು ಹೇಳಿಕೆ ಬಿಡುಗಡೆಗೊಳಿಸಿರುವ ರಾಜ್ಯ ಸರ್ಕಾರ. ಕೋವಿಡ್-19 ಲಸಿಕೆ ಪರಿಚಯಿಸಲು ಭಾರ ಸರ್ಕಾರ ಯೋಜಿಸುತ್ತಿದ್ದು, ಈ ನಿಟ್ಟಿನಲ್ಲಿ ಪೂರ್ವಸಿದ್ಥತೆಯ ಚಟುವಟಿಕೆಗಳನ್ನು ಪ್ರಾರಂಭಿಸಿದೆ. ಪರಿಚಯದ ಆರಂಭಿಕ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳ ಎಲ್ಲಾ ಆರೋಗ್ಯ ಕಾರ್ಯಕರ್ತರು ಫಲಾನುಭವಿಗಳಾಗಿರುತ್ತಾರೆ. ಆದ್ಯತೆಯ ಮೇರೆಗೆ ಇತರೆ ಗುಂಪುಗಳು ಮತ್ತು ಜನಸಂಖ್ಯೆಯನ್ನು ಹಂತಹಂತವಾಗಿ ಒಳಪಡಿಸಲಾಗುತ್ತದೆ. ಲಸಿಕೆಯ ವಿವರ ಮತ್ತು ಕೋವಿಡ್-19 ಲಸಿಕೆ ಪರಿಚಯದ ದಿನಾಂಕವನ್ನು ಭಾರತ ಸರ್ಕಾರದಿಂದ ತಿಳಿಸಲಾಗುವುದು ಎಂದು ಹೇಳಿದೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತ ಸರ್ಕಾರ ನೀಡಿದ ಮಾರ್ಗಸೂಚಿಗಳು ಮತ್ತು ಕಾರ್ಯತಂತ್ರಗಳ ಪ್ರಕಾರ ಆರೋಗ್ಯ ಕಾರ್ಯಕರ್ತರ ಸಿದ್ಧತೆ, ಚಟುವಟಿಕೆಗಳು ಮತ್ತು ದತ್ತಾಂಶ ಸಂಗ್ರಹಣೆಯನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗಿದೆ. 

ಆರೋಗ್ಯ ಕಾರ್ಯಕರ್ತರ ಪ್ರಾಥಮಿಕ ದತ್ತಾಂಶ ಸಂಗ್ರಹಣೆಯನ್ನು ಅಕ್ಟೋಬರ್ 30ರೊಳಗೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆ ಎಲ್ಲಾ ಜಿಲ್ಲೆಗಳು ಜಿಲ್ಲಾ ಮಟ್ಟದ ಅಭಿಶಿಕ್ಷಣವನ್ನು ಪ್ರಾರಂಭಿಸಿವೆ. ಆರೋಗ್ಯ ಕಾರ್ಯಕರ್ತರ ದತ್ತಾಂಶಗಳ ವಿವರಗಳನ್ನು ಸಂಗ್ರಹಿಸಲು ಪ್ರಾಮಾಣಿಕ ಟೆಂಪ್ಲೆಟ್ ಗಳನ್ನು ಎಲ್ಲಾ ಆರೋಗ್ಯ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT