ಬಿಎಸ್ ಯಡಿಯೂರಪ್ಪ 
ರಾಜ್ಯ

ಮಹಾ ಮಳೆಗೆ ಬೆಂಗಳೂರು ತತ್ತರ: ಮಳೆಬಾಧಿತ ಪ್ರದೇಶಗಳಿಗೆ ಸಿಎಂ ಭೇಟಿ, ತಲಾ 25 ಸಾವಿರ ಪರಿಹಾರ ಘೋಷಣೆ

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಮಹತ್ವದ ಸಭೆ ನಡೆಸಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಉನ್ನತಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಮಹತ್ವದ ಸಭೆ ನಡೆಸಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಉನ್ನತಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಅಲ್ಲದೇ ಮಳೆಯಿಂದ ತೀವ್ರ ಬಾಧಿತವಾಗಿರುವ ಹೊಸಕೆರೆಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಅವರು, ಕಂದಾಯ ಸಚಿವ ಆರ್. ಅಶೋಕ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮತ್ತಿತರರ ಜತೆ ಭೇಟಿ ನೀಡಿ, ಪರಿಶೀಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಳೆಯಿಂದ ಹಾನಿಗೊಳಗಾದ ಪ್ರತೀ ಕುಟುಂಬಕ್ಕೆ ತಕ್ಷಣ ತಲಾ 25 ಸಾವಿರ ರೂ.ಚೆಕ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ಎಂದು ಒಪ್ಪಿಕೊಂಡ ಸಿಎಂ, ಶೀಘ್ರದಲ್ಲೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.

ಸಮೀಕ್ಷೆ ನಡೆಸಿ ಪರಿಹಾರವನ್ನು ಹಸ್ತಾಂತರಿಸುವಾಗ ಅಧಿಕಾರಿಗಳು ಪ್ರಾಮಾಣಿಕವಾಗಿರಬೇಕು. ಯಾವುದೇ ಹಣದ ದುರುಪಯೋಗ ಇರಬಾರದು. ನನಗೆ ನೀಡಿದ ಮಾಹಿತಿಯ ಪ್ರಕಾರ, ಸುಮಾರು 650-800 ಮನೆಗಳಿಗೆ ಪ್ರವಾಹದ ನೀರು ಹರಿಯುತ್ತಿರುವುದನ್ನು ಕಂಡು ಬಂದಿದೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!