ಮಹಾದೇವ್ ಪ್ರಕಾಶ್ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ!

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿರುವ ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿರುವ ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. 

ಕಳೆದ 46 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ನನನ್ನು ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದುಬಂದಿದೆ. ಆದರೆ, ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ ಭಾವನೆ ಎಂದು ಪ್ರಕಾಶ್ ಅವರು ಹೇಳಿದ್ದಾರೆ. 

ಪ್ರಶಸ್ತಿಗಾಗಿ ನಾನು ಎಂದಿಗೂ ಲಾಬಿ ಮಾಡಿಲ್ಲ. ಈ ಬಾರಿ ಅಧಿಕಾರದ ಬಲದಿಂದ ಪ್ರಶಸ್ತಿ ಪಡೆದೆ ಎನ್ನುವ ಅಭಿಪ್ರಾಯ ಸಾರ್ವಜನಿಕವಾಗಿ ಮೂಡಬಾರದು. ನಮ್ಮ ನಡೆ ನುಡಿ ಇತರರಿಗೆ ಮಾದರಿಯಾಗಬೇಕೇ ಹೊರತು ಮಾರಕವಾಗಬಾರದು ಎನ್ನುವ ದೃಷ್ಟಿಯಿಂದ ಪ್ರಶಸ್ತಿ ನಿರಾಕರಿಸುವ ನಿರ್ಧಾರ ಮಾಡಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT