ಅಡಿಪಾಯಕ್ಕೆ ತೆಗೆದ ಗುಂಡಿ 
ರಾಜ್ಯ

ಹಾವೇರಿ: ಶಾಲೆ ಮುಂದಿನ ಗುಂಡಿಗೆ ಬಿದ್ದು ಮೂವರು ಮಕ್ಕಳು ಸಾವು

ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಶನಿವಾರ ನಡೆದಿದೆ.

ಹಾವೇರಿ: ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಶನಿವಾರ ನಡೆದಿದೆ.

ಬ್ಯಾಡಗಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಲಾ ಕಟ್ಟಡ ಕಾಮಗಾರಿಯ ಅಡಿಪಾಯಕ್ಕೆ ತೆಗೆದ ಗುಂಡಿಯಲ್ಲಿ ಬಿದ್ದು ಮಕ್ಕಳು ಸಾವನ್ನಪ್ಪಿದ್ದಾರೆ.

ಗೋವಾದಿಂದ ದೇವಿಹೊಸೂರು ಗ್ರಾಮದ ಅಜ್ಜನ ಮನೆಗೆ ಬಂದಿದ್ದ ಇನಾಯತ್‌ ಹಾವಣಗಿ ಅವರ ಮಕ್ಕಳಾದ ಸೈಯದ್‌ ಅಕ್ಮಲ್‌ (8), ಸೈಯದ್‌ ಅಶ್ಫಾಕ್‌‌ (10) ಹಾಗೂ ಕುಂಬಾರ ಓಣಿಯ ಜಾಫರ್‌ ಅನಾಮುಲ್ಲಾ ಸವಣೂರ(10) ಮೃತಪಟ್ಟ ಮಕ್ಕಳು.

ಸಂತೆಗೆ ಹೊರಟಿದ್ದ ತಾಯಿಯನ್ನು ಹಿಂಬಾಲಿಸಿ ಬರುತ್ತಿದ್ದ ಮಕ್ಕಳನ್ನು ವಾಪಸ್‌ ಮನೆಗೆ ಕಳುಹಿಸಲಾಗಿತ್ತು. ಆದರೆ ಮೂರು ಮಕ್ಕಳು ಸೇರಿಕೊಂಡು ಆಟವಾಡಲು ಶಾಲಾ ಮೈದಾನಕ್ಕೆ ತೆರಳಿದ್ದವು. ಈ ಸಂದರ್ಭದಲ್ಲಿ ಗುಂಡಿಯಲ್ಲಿ ಬಿದ್ದು ಮೃತಪಟ್ಟಿವೆ ಎನ್ನಲಾಗಿದೆ. 

ತಾಯಂದಿರ ಆಕ್ರಂದನ ಮುಗಿಲು ಮುಟ್ಟಿತ್ತು. ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ವೈಯಕ್ತಿಕವಾಗಿ ಮಕ್ಕಳಿಗೆ ತಲಾ 25 ಸಾವಿರ ರೂ ಹಾಗೂ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT