ಯಧುವೀರ್ 
ರಾಜ್ಯ

ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ರಿಂದ ಆಯುಧ ಪೂಜೆ 

ಮೈಸೂರು ಅರಮನೆಯಲ್ಲಿ  ಆಯುಧ ಪೂಜೆಯನ್ನು  ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ನೆರವೇರಿಸಿದರು.

ಮೈಸೂರು: ಮೈಸೂರು ಅರಮನೆಯಲ್ಲಿ  ಆಯುಧ ಪೂಜೆಯನ್ನು  ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ನೆರವೇರಿಸಿದರು.

ಇಂದು ಬೆಳಿಗ್ಗೆ 6 ಗಂಟೆಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು, ಅರಮನೆಯ ಆನೆ  ಬಾಗಿಲಿಗೆ ಆಗಮಿಸಿದವು. ಮುಂಜಾನೆ ಜರುಗಿದ  ಚಂಡಿ ಹೋಮಕ್ಕೆ ಯದುವೀರ್ ಅವರು ಪೂರ್ಣಾಹುತಿ ಅರ್ಪಿಸಿದರು.  

ಇದಕ್ಕೂ ಮೊದಲು ಮುಂಜಾನೆ 5 ಗಂಟೆ 28 ನಿಮಿಷದಿಂದ 6 ಗಂಟೆ 48 ನಿಮಿಷದೊಳಗೆ ಸಲ್ಲುವ ಶುಭ ಮಹೂರ್ತದಲ್ಲಿ ಅರಮನೆಯ  ಆಯುಧಗಳನ್ನು ರಥ ವಾಹನದಲ್ಲಿ ಆನೆ, ಕುದುರೆ, ಒಂಟೆ ಮತ್ತು ಹಸುವಿನೊಡನೆ ಸೋಮೇಶ್ವರ ದೇವಾಲಯಕ್ಕೆ ತರಲಾಯಿತು.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮತ್ತೆ ಅರಮನೆಯ ಆನೆ ಬಾಗಿಲಿಗೆ ತರಲಾಯಿತು.ತರುವಾಯ ಶುಭ ಮಹೂರ್ತದಲ್ಲಿ ಅರಮನೆಯ ಕಲ್ಯಾಣ ಮಂಟಪದಲ್ಲಿ ಯದುವೀರ್ ಅವರು ರಾಜ ಮಹಾರಾಜರು ಬಳಸುತ್ತಿದ್ದ ಯುದ್ಧ ಸಾಮಗ್ರಿಗಳಿಗೆ ಪೂಜೆ ಸಲ್ಲಿಸಿದರು. 

ತರುವಾಯ ಅರಮನೆಯ ಸವಾರಿ ತೊಟ್ಟಿಯಲ್ಲಿ ಯದುವೀರ್ ಅವರು ತಾವು ಬಳಸುವ ಕಾರುಗಳು ಸೇರಿದಂತೆ ಆನೆ, ಕುದುರೆ, ಒಂಟೆ, ಹಸುವಿಗೂ ಪೂಜೆ ಸಲ್ಲಿಸಿದರು. ಮಂಗಳವಾದ್ಯ ಹಾಗೂ ಪೊಲೀಸ್  ಬ್ಯಾಂಡ್ ಸಂಗೀತದ ಹಿಮ್ಮೇಳದಲ್ಲಿ ಯದುವೀರ್ ಅವರು ಆಯುಧ ಪೂಜೆ ನೆರವೇರಿಸಿದರು. 

ಜನರಿಗೆ ಎದುರಾಗಿರುವ ಕೊರೋನಾ ಸಂಕಷ್ಟದಿಂದ ಮುಕ್ತ ಮಾಡಿ ಸುಖ, ಸಮೃದ್ಧಿ ನೆಲೆಸಲಿ ಎಂದು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!