ರಾಜ್ಯ

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Srinivasamurthy VN

ಬೆಳಗಾವಿ: ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನೋರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಾಡಿ ರಸ್ತೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹತ್ಯೆಯಾದ ಯುವಕನನ್ನು ಬೆಳಗಾವಿ ಅಜಾಮ್ ನಗರ ನಿವಾಸಿ ಶೆಹಬಾಜ್ (24)ಎಂದು ಗುರುತಿಸಲಾಗಿದೆ. ಮೃತ ಶೆಹಬಾಜ್ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ದುಷ್ಕರ್ಮಿಗಳ ಗುಂಪೊಂದು ಇದ್ದಕ್ಕಿದ್ದಂತೆ ದಾಳಿ ನಡೆಸಿ ಪರಾರಿಯಾಗಿದೆ. ಈ ಸಂದರ್ಭದಲ್ಲಿ ತೀವ್ರ ಗಾಯಗೊಂಡ ಶೆಹಬಾಜ್​ನನ್ನ ಬಿಮ್ಸ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಮೃತಪಟ್ಟಿದ್ದಾನೆ. ಈತನ ಮೇಲೆ ಕೊಲೆ ಸೇರಿದಂತೆ ಹಲವು ಪ್ರಕರಣಗಳಿವೆ ಎನ್ನಲಾಗಿದೆ. ಶೆಹಬಾಜ್ ಸಾವಿನ ಸುದ್ದಿ ಹರಡುತ್ತಿದ್ದಂತೆಯೇ  ಜಿಲ್ಲಾ ಆಸ್ಪತ್ರೆಯ ಬಳಿ ನೂರಾರು ಯುವಕರು ಸೇರಿದ್ದರು, ಪೊಲೀಸರು ಯುವಕರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

SCROLL FOR NEXT