ದಸರಾ ಸ್ಥಬ್ಧಚಿತ್ರ 
ರಾಜ್ಯ

ಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಹೌದು.. ಕೊರೊನಾ ಹಿನ್ನೆಲೆಯಲ್ಲಿ ‌ಈ ಬಾರಿ ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಕೇವಲ ಅರಮನೆಯ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಸ್ತಬ್ಧಚಿತ್ರಗಳನ್ನು ಎರಡಕ್ಕೆ ಸೀಮಿತಗೊಳಿಸಲಾಗಿದೆ. ಈ ಎರಡು ಸ್ಥಬ್ಧ ಚಿತ್ರಗಳ ಪೈಕಿ ಮೈಸೂರು  ಜಿಲ್ಲಾ ಪಂಚಾಯತಿಯಿಂದ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಒಂದಾಗಿದ್ದು, ಮಹಾಮಾರಿ ಕೊರೊನಾವನ್ನು ತಡೆಯಲು ಕೊರೊನಾ ವಾರಿಯರ್ಸ್​ಗಳ ಪಾತ್ರ ಅತಿ ಮುಖ್ಯ ಹೀಗಾಗಿ ಈ ಸ್ತಬ್ಧಚಿತ್ರವನ್ನು ಅವರಿಗಾಗಿ ಅರ್ಪಿಸಲಾಗಿದೆ. ಅಂತೆಯೇ ಇಡೀ ವಿಶ್ವ, ಕುಟುಂಬವನ್ನು ವೈದ್ಯರು ಕಾಪಾಡುತ್ತಿದ್ದಾರೆ ಎಂದು  ಸಾರುವ ಚಿತ್ರ ಇದಾಗಿದೆ.

ಇನ್ನು ಮತ್ತೊಂದು ವಿಶೇಷ ಅಂದ್ರೆ ಅದು ಅರಮನೆ ವಾದ್ಯಗೋಷ್ಠಿಯ ನಿರ್ಮಾಣ ಮಾಡಲಾಗಿದೆ. ಇದನ್ನು ಆನೆ ಬಂಡಿ ಸ್ತಬ್ಧಚಿತ್ರ ಎನ್ನಲಾಗುತ್ತೆ. ಈ ಎರಡು ಸ್ತಬ್ಧಚಿತ್ರಗಳು ಮಾತ್ರ ಮೆರೆವಣೆಗೆಯಲ್ಲಿ ಭಾಗವಹಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT