ಅಮೆಜಾನ್ ಫ್ಲಿಪ್‌ಕಾರ್ಟ್ 
ರಾಜ್ಯ

ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧದ ತನಿಖೆಗೆ ಸಿಸಿಐ ಮನವಿ: ನ್ಯಾಯ ತೀರ್ಮಾನಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ಸ್ಪರ್ಧಾತ್ಮಕ ವಿರೋಧಿ ನಡೆಗಳಿಗಾಗಿ ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ವಿರುದ್ಧದ ತನಿಖೆಯಲ್ಲಿನ ಭಾರತದ ಸ್ಪರ್ಧಾ ಆಯೋಗದ ತಡೆಯಾಜ್ಞೆ ಮನವಿಯನ್ನು ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ.

ನವದೆಹಲಿ: ಸ್ಪರ್ಧಾತ್ಮಕ ವಿರೋಧಿ ನಡೆಗಳಿಗಾಗಿ ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ವಿರುದ್ಧದ ತನಿಖೆಯಲ್ಲಿನ ಭಾರತದ ಸ್ಪರ್ಧಾ ಆಯೋಗದ ತಡೆಯಾಜ್ಞೆ ಮನವಿಯನ್ನು ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಕರ್, ದಿನೇಶ್ ಮಹೇಶ್ವರಿ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠ ಮನವಿಯ ತೀರ್ಮಾನಕ್ಕಾಗಿ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಭಾರತದ ಸ್ಪರ್ಧಾ ಆಯೋಗವನ್ನು ಕೇಳಿದೆ.

ಸಿಸಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇ-ಕಾಮರ್ಸ್ ಕಂಪನಿಗಳ ವಿರುದ್ಧ ಆದೇಶಿಸಿದ ತನಿಖೆ ಆಡಳಿತಾತ್ಮಕ ಸ್ವರೂಪದ್ದಾಗಿದೆ ಮತ್ತು ಯಾವುದೇ ಪಕ್ಷದ  ಪಕ್ಷದ ಹಕ್ಕುಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು. ಈ ಪ್ರಕರಣದಲ್ಲಿ ಹಲವಾರು ವ್ಯಾಪಕ ಸಮಸ್ಯೆಗಳಿವೆ ಎಂದು ಬಾಕಿ ಇರುವ ಅರ್ಜಿಯ ಬಗ್ಗೆ ನ್ಯಾಯಪೀಠದ ಮುಂದೆ ಪ್ರಸ್ತಾಪಿಸಿದರು.

ಇನ್ನು ಇ-ಕಾಮರ್ಸ್ ಕಂಪನಿಗಳ ಪರ ಹಾಜರಾದ ಹಿರಿಯ ವಕೀಲ ಎ.ಎಂ.ಸಿಂಗ್ವಿ 200 ದಿನಗಳ ವಿಳಂಬದ ನಂತರ ಸಿಸಿಐ ಸುಒರೀಂ ಕೋರ್ಟ್ ನ ಸಂಪರ್ಕ ಮಾಡಿದೆ ಎಂದಿದ್ದಾರೆ.  

ಹೈಕೋರ್ಟ್ ಈ ವಿಷಯವನ್ನು ಆಲಿಸಿ ಆರು ವಾರಗಳಲ್ಲಿ ತೀರ್ಮಾನಿಸುತ್ತದೆ ಎಂದು ನ್ಯಾಯಪೀಠ ಹೇಳಿದೆ ಮತ್ತು ಈ ಅವಧಿಯಲ್ಲಿ ಹೈಕೋರ್ಟ್ ಯಾವುದೇ ನಿರ್ಧಾರವನ್ನು ನೀಡದಿದ್ದರೆ ಅರ್ಜಿಯನ್ನು ಮರು ಊರ್ಜಿತಗೊಳಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಫೆ .14 ರಂದು ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ವಿರುದ್ಧ ಸಿಸಿಐ ಆದೇಶಿಸಿರುವ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಸಿಸಿಐ ಆದೇಶಿಸಿದ ತನಿಖೆಯನ್ನು ತಡೆಹಿಡಿಯಬೇಕೆಂದು ಕೋರಿ ಅಮೆಜಾನ್ ಹೈಕೋರ್ಟ್‌ಗೆ ಮೊರೆ ಹೋಗಿತ್ತು.

ಸ್ಪರ್ಧಾತ್ಮಕ ವಿರೋಧಿ ನಡವಳಿಕೆಯ ಆರೋಪದ ಬಗ್ಗೆ ತನಿಖೆ ನಡೆಸಲು ಸಿಸಿಐ ನಿರ್ದೇಶಿಸಿದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಫ್ಲಿಪ್‌ಕಾರ್ಟ್ ಸಹ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ತನ್ನ ಮನವಿಯಲ್ಲಿ, ಅಮೆಜಾನ್ ಸಿಸಿಐನ ಜನವರಿ 13, 2020 ರ ತನಿಖಾ ಆದೇಶವನ್ನು ರದ್ದುಗೊಳಿಸಲು ಬಯಸಿತ್ತು."ನ್ಯಾಯದ ಹಿತದೃಷ್ಟಿಯಿಂದ ಪ್ರಕರಣದ ಸಂಗತಿಗಳು ಮತ್ತು ಸನ್ನಿವೇಶಗಳ" ಆಧಾರದ ಮೇಲೆ ತೀರ್ಮಾನವನ್ನು ನೀಡುವಂತೆ ನ್ಯಾಯಾಲಯವನ್ನು ಪ್ರಾರ್ಥಿಸಿತ್ತು.

"ನ್ಯಾಯದ ಹಿತದೃಷ್ಟಿಯಿಂದ ಪ್ರಕರಣದ ಸಂಗತಿಗಳು ಮತ್ತು ಸನ್ನಿವೇಶಗಳ" ಆಧಾರದ ಮೇಲೆ ಪರಿಹಾರವನ್ನು ನೀಡುವಂತೆ ನ್ಯಾಯಾಲಯವನ್ನು ಪ್ರಾರ್ಥಿಸಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT