ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ಸಿಗುತ್ತಿಲ್ಲ ಸ್ಟೈಫಂಡ್

ಕೊರೋನಾ ಕಾರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗೆ ತಿಂಗಳಿನ ಸ್ಟೈಫಂಡ್ ತಲುಪಲು ವಿಳಂಬವಾಗುತ್ತಿದೆ.

ಮಂಗಳೂರು: ಕೊರೋನಾ ಕಾರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗೆ ತಿಂಗಳಿನ ಸ್ಟೈಫಂಡ್ ತಲುಪಲು ವಿಳಂಬವಾಗುತ್ತಿದೆ.

ಶೆ. 60 ಮತ್ತು ಅದಕ್ಕಿಂತ ಹೆಚ್ಚಿನ ಸಮಸ್ಯೆ ಹೊಂದಿರುವ ಸಂತ್ರಸ್ತರಿಗೆ ಮಾಸಿಕ 3,000 ರೂ., ಶೇ. 25 ಮತ್ತು ಅದಕ್ಕಿಂತ ಹೆಚ್ಚಿನ ಸಮಸ್ಯೆ ಹೊಂದಿರುವವರಿಗೆ 1,500 ರೂಪಾಯಿಗಳನ್ನು ಪ್ರತಿ ತಿಂಗಳು ಸ್ಟೈಪಂಡ್ ರೂಪದಲ್ಲಿ ನೀಡಲಾಗುತ್ತಿದೆ.

ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಇತರ ಸ್ಥಳಗಳಲ್ಲಿ ಸುಮಾರು 3,600 ಕ್ಕೂ ಹೆಚ್ಚು ಸಂತ್ರಸ್ತರಿದ್ದಾರೆ. ಇವರಿಗೆಲ್ಲಾ ಸರ್ಕಾರದ ವಿವಿಧ ಯೋಜನೆಗಳಿಂದ ಸೌಲಭ್ಯ ದೊರಕುತ್ತಿವೆ.

ಹಲವು ಸಂತ್ರಸ್ತರು ಸರ್ಕಾರ ನೀಡುವ ಈ ಹಣವನ್ನೇ ನಂಬಿಕೊಂಡು ಬದುಕುತ್ತಿದ್ದಾರೆ, ಆದರೆ ಕೆಲವು ಕಳೆದ ತಿಂಗಳುಗಳಿಂದ ಸರಿಯಾಗಿ ಹಣ ತಲುಪದ ಕಾರಣ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಎಂಡೋಸಲ್ಫಾನ್ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ್ ಗೌಡ ಹೇಳಿದ್ದಾರೆ.

ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಹಣ ಸಿಗುತ್ತಿಲ್ಲ, ಸುಮಾರು ಒಂದು ವರ್ಷವಾದರೂ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿಲ್ಲವೇ? ಯಾವುದೇ ಸೌಲಭ್ಯವಿಲ್ಲದೇ ಸರ್ಕಾರದ ಸ್ಟೈಪಂಡ್ ಇಲ್ಲದೇ ಕೊರೋನಾ ಸಂದರ್ಭದಲ್ಲಿ ಇವರು ಹೇಗೆ ತಮ್ಮ ಜೀವನ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.,

ಸ್ಟೈಫಂಡ್ ವಿತರಣೆಯಲ್ಲಿ ತಾಂತ್ರಿಕ ಸಮಸ್ಯೆಗಳಿವೆ, ಕೆಲವು ಸಂತ್ರಸ್ತರಿಗೆ ತಪ್ಪು ಮಾಹಿತಿ ನೀಡಿರಬಹುದು ಅಥವಾ ಅವರ ಗುರುತಿನ ಚೀಟಿ ತಪ್ಪಿರಬಹುದು, ಈ ಸಂಬಂಧ ಗಮನ ಹರಿಸಲಾಗುವುದು ಎಂದು ಜಿಲ್ಲಾ ಎಂಡೋ ಸಲ್ಫಾನ್ ನೋಡಲ್ ಅಧಿಕಾರಿ ಡಾ.ನವೀನ್ ಚಂದ್ರ ಹೇಳಿದ್ದಾರೆ. ಹಾಸಿಗೆ ಹಿಡಿದ ಸಂತ್ರಸ್ತರಿಗಾಗಿ ಸರ್ಕಾರ ನಡೆಸುವ ಶಾಶ್ವತ ಆರೈಕೆ ಕೇಂದ್ರವನ್ನು ತೆರೆಯುವುದು ಮತ್ತೊಂದು ಬೇಡಿಕೆಯಾಗಿದೆ ಎಂದು ಹೇಳಿದ್ದಾರೆ.

ಎಂಡೋ ಸಲ್ಫಾನ್ ಪೀಡಿತರಿಗೆ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು, ಆದರೆ 2011 ರಿಂದಲೂ ಈ ಬೇಡಿಕೆ ಈಡೇರಿಲ್ಲ, ಸದ್ಯ ಕೊಕ್ಕಾಡ, ಕೊಯಿಲಾ ಮತ್ತು ಉಜಿರೆಯಲ್ಲಿ ಡೇ ಕೇರ್ ಸೆಂಟರ್ ಗಳಿವೆ, 8 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ, ಆದರೆ ಅವುಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ.

ದಿನದ ಆರೈಕೆ ಕೇಂದ್ರಗಳ ಅನುಪಸ್ಥಿತಿಯಲ್ಲಿ, ಮೊಬೈಲ್ ವೈದ್ಯಕೀಯ ಘಟಕಗಳು ಸಂತ್ರಸ್ತರಿಗೆ ಔಷಧಿಗಳನ್ನು ಒದಗಿಸುತ್ತಿವೆ. ಇವುಗಳನ್ನು ಆಸ್ಪತ್ರೆಯಿಂದಲೇ ಒದಗಿಸಲಾಗುತ್ತಿದೆ. ಅಲ್ಲಿ ಸಿಗದ ಔಷಧಿಗಳನ್ನು ಹೊರಗಡೆಯಿಂದ ತಂದು ಪೂರೈಸಲಾಗುತ್ತಿದೆ. ಆದರೆ ಕೊರೋನಾ ಸಂದರ್ಭದಲ್ಲಿ ಡೇ ಕೇರ್ ಸೆಂಟರ್ ಗಳನ್ನು ತೆರೆಯುವುದು ಅತಿ ಹೆಚ್ಚು ಅಪಾಯಕಾರಿ ಎಂದು ಡಾ. ಚಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT