ಸಚಿವ ಸುರೇಶ್ ಕುಮಾರ್ 
ರಾಜ್ಯ

ಆನ್-ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಸುರೇಶ್ ಕುಮಾರ್

ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗ ಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್‍ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು ಶಿಕ್ಷಣ ಸಚಿವ ಎಸ್.ಸು ರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗ ಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್‍ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು ಶಿಕ್ಷಣ ಸಚಿವ ಎಸ್.ಸು ರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲೆಗಳು ಸರ್ಕಾರದ ಆನ್-ಲೈನ್ ಮಾರ್ಗಸೂಚಿ ಪಾಲಿಸದೇ ಹೆಚ್ಚಿನ ಅವಧಿ ಆನ್-ಲೈನ್ ತರಗತಿಗಳನ್ನು ನಡೆ ಸುತ್ತಿರುವುದರಿಂದ ಮಕ್ಕಳ ಆರೋಗ್ಯ ಮತ್ತು ದೃಷ್ಟಿಯ ಮೇಲೆ ಪರಿಣಾಮಗಳುಂಟಾಗುತ್ತಿವೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇಲಾಖೆ ಸುತ್ತೋಲೆ ಹೊರಡಿಸಿದ್ದು,ತಜ್ಞರ ವರದಿಯ ಶಿಫಾರಸಿನ ಅವಧಿಯನ್ವಯ ಆನ್-ಲೈನ್ ಬೋಧನೆ ಮಾಡಬೇಕು.ಈ ಮಾರ್ಗಸೂಚಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ-1983(1995)ರ ಸೆಕ್ಷನ್124(5) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜ್ಯದ ಖಾಸಗಿ ಶಾಲೆಗಳು ಆನ್-ಲೈನ್ ಬೋಧನೆ ಆರಂಭಿಸಿ ಹೆಚ್ಚುವರಿ ಶುಲ್ಕ ಪಾವತಿಸಲು ಒತ್ತಡ ತರುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರ ದೂರಿನನ್ವಯ ಕ್ರಮ ಕೈಗೊಂಡು ಹೆಚ್ಚುವರಿ ಶುಲ್ಕ ಪಡೆಯದೇ ಆನ್-ಲೈನ್ ತರಗತಿಗಳನ್ನು ನಡೆಸುವಂತೆ ಏಪ್ರಿಲ್ 2020ರಲ್ಲಿ ಆದೇಶ ನೀಡಲಾಗಿತ್ತು. ಪೋಷಕರಿಗೆ ಮಕ್ಕಳ ಆನ್-ಲೈನ್ ತರಗತಿಗಳಿಗೆ ಮೊಬೈಲ್‍ನಂತಹ ಸಾಧನಗಳನ್ನು ಕೊಳ್ಳಲು ಸಾಮರ್ಥ್ಯ ಇಲ್ಲದಿರುವ ಮತ್ತು ಎಲ್‍ಕೆಜಿಯಿಂದ ಐದನೇ ತರಗತಿ ಮಕ್ಕಳು ಆನ್-ಲೈನ್ ಶಿಕ್ಷಣದಲ್ಲಿ ಭಾಗವಹಿಸಲು ತೊಂದರೆಗಳಾಗುತ್ತಿವೆ ಎಂಬ ಪೋಷಕರ ದೂರಿನ ಹಿನ್ನೆಲೆಯಲ್ಲಿ ಜೂ.15ರಂದು ತಜ್ಞರ ಸಮಿತಿ ರಚಿಸಿ ಆನ್-ಲೈನ್ ಶಿಕ್ಷಣ ಕುರಿತು ವರದಿ ನೀಡಲು ಕೇಳಲಾಗಿತ್ತು. 

ಏತನ್ಮಧ್ಯೆ ಜೂ. 17ರಂದು ಎಲ್‍ಕೆಜಿಯಿಂದ ಐದನೇ ತರಗತಿವರೆಗೆ ಆನ್-ಲೈನ್ ಶಿಕ್ಷಣ ರದ್ದುಪಡಿಸಲು ಆದೇಶ ಹೊರಡಿಸಲಾಗಿತ್ತು. ತಜ್ಞರ ಸಮಿತಿ ವರದಿ ಬರುವತನಕ ಪ್ರಾಥಮಿಕ ತರಗತಿಗಳಿಂದ 10ನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣಕ್ಕೆ ತರಗತಿವಾರು ಆವಧಿ ನಿಗದಿಪಡಿಸಿ ಜೂ. 27ರಂದು ಸುತ್ತೋಲೆ ಹೊರಡಿಸಲಾಗಿತ್ತು. ಇಲಾಖೆಯ ಜೂ. 17ರ ಸುತ್ತೋಲೆ ವಿರುದ್ಧ ಖಾಸಗಿ ಶಿಕ್ಷಣಸಂಸ್ಥೆಗಳು ಉಚ್ಚ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿದ್ದು, ಘನ ನ್ಯಾಯಾಲಯವು ಜೂ. 17 ಮತ್ತು ಜೂ. 27ರ ಆದೇಶಗಳಿಗೆ ತಡೆಯಾಜ್ಞೆ ನೀಡಿದ್ದು, ಆನ್-ಲೈನ್ ಶಿಕ್ಷಣವನ್ನು ಯಥಾವತ್ತಾಗಿ ಮುಂದುವರೆಸಿಕೊಂಡು ಹೋಗಲು ಅವಕಾಶವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT