ಸಾಂದರ್ಭಿಕ ಚಿತ್ರ 
ರಾಜ್ಯ

ಲಲಿತಾ ಜ್ಯುವೆಲ್ಲರಿ ದರೋಡೆ ಪ್ರಕರಣ: ಜೈಲಿನಲ್ಲೇ ಮಾಸ್ಟರ್ ಮೈಂಡ್ ಸಾವು

ಲಲಿತಾ ಜ್ಯುವೆಲ್ಲರಿ ಪ್ಯಾಲೇಸ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್. ಮುರುಗನ್ ಅಲಿಯಾಸ್ ತಿರುವರೂರ್ ಮುರುಗನ್ ಅನಾರೋಗ್ಯದಿಂದ ಜೈಲಿನಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರು: ಲಲಿತಾ ಜ್ಯುವೆಲ್ಲರಿ ಪ್ಯಾಲೇಸ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್. ಮುರುಗನ್ ಅಲಿಯಾಸ್ ತಿರುವರೂರ್ ಮುರುಗನ್ ಅನಾರೋಗ್ಯದಿಂದ ಜೈಲಿನಲ್ಲೇ ಸಾವನ್ನಪ್ಪಿದ್ದಾನೆ.

ದರೋಡೆ ನಡೆದ 1 ವರ್ಷದ ನಂತರ ಆರೋಪಿ ಮುರುಗನ್ ನ್ಯಾಯಾಲಯಕ್ಕೆ ಶರಣಾಗಿದ್ದನು, ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಡಲಾಗಿತ್ತು. ಕಳೆದ ಕೆಲವು ತಿಂಗಳಿಂದ ಆತ ಅನಾರೋಗ್ಯದಿಂದ ಬಳಲುತ್ತಿದ್ದನು, 46 ವರ್ಷದ ಮುರುಗನ್ ನನ್ನು ಅಕ್ಟೋಬರ್ 12 ರಂದು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.

ತಿರುಚನಾಪಳ್ಳಿಯ ಜ್ಯುವೆಲ್ಲರಿ ಮಳಿಗೆಗೆ ಕನ್ನ ಹಾಕಿ 16 ಕೋಟಿಗೂ ಅಧಿಕ ಮೊತ್ತದ ವಜ್ರ ಮತ್ತು ಪ್ಲಾಟಿನಮ್‌ ಆಭರಣಗಳನ್ನು ಕದ್ದಿದ್ದ ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರು ನ್ಯಾಯಾಲಯಕ್ಕೆ ಶರಣಾಗಿದ್ದ.  2019 ಅಕ್ಟೋಬರ್ .2ರಂದು ಬೆಕ್ಕು ಮತ್ತು ನಾಯಿಯ ಮುಖವಾಡ ಧರಿಸಿದ್ದ ಗ್ಯಾಂಗ್‌ ತಿರುಚನಾಪಳ್ಳಿಯ ಆಭರಣ ಮಳಿಗೆಯನ್ನು ದೋಚಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT