ಸಂಗ್ರಹ ಚಿತ್ರ 
ರಾಜ್ಯ

ಟಿಇಟಿ ಪಾಸ್ ಆದವರಿಗೊಂದು ಸಿಹಿ ಸುದ್ದಿ: ಅರ್ಹತಾ ಪ್ರಮಾಣಪತ್ರ ಜೀವಿತಾವಧಿವರೆಗೆ ಮಾನ್ಯ!

ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. 

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. 

ಈ ಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು (ಎನ್'ಸಿಟಿಇ) ತೀರ್ಮಾನ ಕೈಗೊಂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಶಿಕ್ಷಕರಾಗಲು ಟಿಇಟಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಮಾಡಲಾಗಿದ್ದು, ಒಮ್ಮೆ ಉತ್ತೀರ್ಣರಾದರೆ 7 ವರ್ಷಗಳವರೆಗೆ ಮಾತ್ರ ಮಾನ್ಯತೆ ಇರುತ್ತಿತ್ತು. ಆದರೆ ಇತ್ತೀಚೆಗೆ ನಡೆದ ಎನ್ ಸಿಟಿ 50ನೇ ಸಾಮನ್ಯ ಸಭೆಯಲ್ಲಿ ಟಿಇಟಿ ಪ್ರಮಾಣ ಪತ್ರದ ಮಾನ್ಯತೆಯ ಅವಧಿಯನ್ನು ಜೀವಿತಾವಧಿಯವರೆಗೆ ವಿಸ್ತರಿಸಿದೆ.

ರಾಜ್ಯದಲ್ಲಿ ಇತ್ತೀಚಿಗೆ ಟಿಇಟಿ ಪರೀಕ್ಷೆ ನಡೆದಿದ್ದು, 2 ಲಕ್ಷಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಹೊಸ ನಿಯಮ ಈ ವರ್ಷದಿಂದಲೇ ಅನ್ವಯವಾಗುವ ಸಾಧ್ಯತೆಗಳಿವೆ. 

"ಶಿಕ್ಷಕರ ಕೆಲಸವನ್ನು ಬಯಸುವವರಿಗಾಗಿ ಏಳು ವರ್ಷಗಳ ಸಿಂಧುತ್ವವನ್ನು ನೀಡಲಾಗಿತ್ತು. ನೇಮಕಗೊಂಡ ಶಿಕ್ಷಕರು ಮತ್ತೆ ಮತ್ತೆ ಪರೀಕ್ಷೆ ಬರೆಯುವುದು ಸಮಸ್ಯಾತ್ಮಕವಾಗಿದ್ದು ಎಂದು ಹೇಳಿರುವ ಶಿಕ್ಷಕರ ವೃಂದ ಇದೀಗ ಈ ನಿರ್ಧಾರವನ್ನು ಸ್ವಾಗತಿಸಿದೆ. 

ಸರ್ಕಾರಿ ಶಾಲೆಗಳಲ್ಲಿ ಪಾಠ ಮಾಡುವ ಶಿಕ್ಷಕರಿಗೆ ಟಿಇಟಿ ಕಡ್ಡಾಯವಾಗಿದೆ. ಆದರೆ, ಖಾಸಗಿ ಶಾಲೆಗಳಲ್ಲಿ ಇದಕ್ಕೆ ಏಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT