ಸಂಗ್ರಹ ಚಿತ್ರ 
ರಾಜ್ಯ

ಟಿಇಟಿ ಪಾಸ್ ಆದವರಿಗೊಂದು ಸಿಹಿ ಸುದ್ದಿ: ಅರ್ಹತಾ ಪ್ರಮಾಣಪತ್ರ ಜೀವಿತಾವಧಿವರೆಗೆ ಮಾನ್ಯ!

ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. 

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. 

ಈ ಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು (ಎನ್'ಸಿಟಿಇ) ತೀರ್ಮಾನ ಕೈಗೊಂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಶಿಕ್ಷಕರಾಗಲು ಟಿಇಟಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಮಾಡಲಾಗಿದ್ದು, ಒಮ್ಮೆ ಉತ್ತೀರ್ಣರಾದರೆ 7 ವರ್ಷಗಳವರೆಗೆ ಮಾತ್ರ ಮಾನ್ಯತೆ ಇರುತ್ತಿತ್ತು. ಆದರೆ ಇತ್ತೀಚೆಗೆ ನಡೆದ ಎನ್ ಸಿಟಿ 50ನೇ ಸಾಮನ್ಯ ಸಭೆಯಲ್ಲಿ ಟಿಇಟಿ ಪ್ರಮಾಣ ಪತ್ರದ ಮಾನ್ಯತೆಯ ಅವಧಿಯನ್ನು ಜೀವಿತಾವಧಿಯವರೆಗೆ ವಿಸ್ತರಿಸಿದೆ.

ರಾಜ್ಯದಲ್ಲಿ ಇತ್ತೀಚಿಗೆ ಟಿಇಟಿ ಪರೀಕ್ಷೆ ನಡೆದಿದ್ದು, 2 ಲಕ್ಷಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಹೊಸ ನಿಯಮ ಈ ವರ್ಷದಿಂದಲೇ ಅನ್ವಯವಾಗುವ ಸಾಧ್ಯತೆಗಳಿವೆ. 

"ಶಿಕ್ಷಕರ ಕೆಲಸವನ್ನು ಬಯಸುವವರಿಗಾಗಿ ಏಳು ವರ್ಷಗಳ ಸಿಂಧುತ್ವವನ್ನು ನೀಡಲಾಗಿತ್ತು. ನೇಮಕಗೊಂಡ ಶಿಕ್ಷಕರು ಮತ್ತೆ ಮತ್ತೆ ಪರೀಕ್ಷೆ ಬರೆಯುವುದು ಸಮಸ್ಯಾತ್ಮಕವಾಗಿದ್ದು ಎಂದು ಹೇಳಿರುವ ಶಿಕ್ಷಕರ ವೃಂದ ಇದೀಗ ಈ ನಿರ್ಧಾರವನ್ನು ಸ್ವಾಗತಿಸಿದೆ. 

ಸರ್ಕಾರಿ ಶಾಲೆಗಳಲ್ಲಿ ಪಾಠ ಮಾಡುವ ಶಿಕ್ಷಕರಿಗೆ ಟಿಇಟಿ ಕಡ್ಡಾಯವಾಗಿದೆ. ಆದರೆ, ಖಾಸಗಿ ಶಾಲೆಗಳಲ್ಲಿ ಇದಕ್ಕೆ ಏಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT