ಸಂಗ್ರಹ ಚಿತ್ರ 
ರಾಜ್ಯ

ನಿವೃತ್ತಿಗೆ 2 ದಿನ ಬಾಕಿ ಇರುವಾಗಲೇ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಎಡಿಜಿಪಿಯಾಗಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಡಿಜಿಪಿ ಹುದ್ದೆಗೆ ಬಡ್ತಿಯೊಂದಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 

ಬೆಂಗಳೂರು: ಎಡಿಜಿಪಿಯಾಗಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಡಿಜಿಪಿ ಹುದ್ದೆಗೆ ಬಡ್ತಿಯೊಂದಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 

ರಾಜಧಾನಿ ಬೆಂಗಳೂರು ಆಯುಕ್ತರಾಗಿದ್ದ ಟಿ.ಸುನೀಲ್ ಕುಮಾರ್ ಅವರಿಗೆ ನಿವೃತ್ತಿಗೂ ಮುನ್ನ ಒಂದು ದಿನಕ್ಕೆ ಡಿಜಿಪಿಯಾಗಿ ಬಡ್ತಿ ನೀಡಲಾಗಿದೆ ಎಂಬುದು ವಿಶೇಷ. ಭ್ರಷ್ಟಾಚಾರ ನಿಗ್ರಹದಳದ ಎಡಿಜಿಪಿಯಾಗಿದ್ದ ಸುನೀಲ್ ಕುಮಾರ್ ಅವರಿಗೆ 1 ದಿನದ ಮಟ್ಟಿದೆ ಬಡ್ತಿ ನೀಡಿ, ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. 

ಅದೇ ರೀತಿ ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾದ ಡಿಜಿಪಿ ಅಮರ್ ಕುಮಾರ್ ಅವರಿಗೆ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ನೇಮಿಸಿ ಬಡ್ತಿ ನೀಡಿ ವರ್ಗಾವಣೆಗೊಳಿಸಲಾಗಿದೆ. 

ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ರಾಜ್ಯ ಪೊಲೀಸ್ ಸಂಪರ್ಕ ಸಂವಹನ ಹಾಗೂ ಆಧುನೀಕರಣ ಜೊತೆಗೆ ಕಾನೂನು ಸುವ್ಯವಸ್ಥೆ ಹೊಣೆಯನ್ನು ನೀಡಲಾಗಿದೆ. ಈ ನಡುವೆ, ಇದೇ ತಿಂಗಳು 31ರ ನಂತರ ಅಗ್ನಿಶಾಮಕ ಇಲಾಖೆಯ ಡಿಜಿಪಿ ಎ.ಎಂ.ಪ್ರಸಾದ್ ಕೂಡ ನಿವೃತ್ತಿ ಹೊಂದಲಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT