ದೇವೇಗೌಡ 
ರಾಜ್ಯ

ರಾಜಕಾಲುವೆ ಒತ್ತುವರಿ ಕುರಿತು ಸರ್ಕಾರ ಸ್ವಲ್ಪ ಕಠಿಣ ನಿರ್ಧಾರ ಮಾಡಬೇಕು: ಹೆಚ್.ಡಿ. ದೇವೇಗೌಡ

ರಾಜಕಾಲುವೆ ಒತ್ತುವರಿ ಕುರಿತು ಸರ್ಕಾರ ಸ್ವಲ್ಪ ಕಠಿಣ ನಿರ್ಧಾರ ಮಾಡಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗ್ರಹಿಸಿದ್ದಾರೆ. 

ಬೆಂಗಳೂರು: ರಾಜಕಾಲುವೆ ಒತ್ತುವರಿ ಕುರಿತು ಸರ್ಕಾರ ಸ್ವಲ್ಪ ಕಠಿಣ ನಿರ್ಧಾರ ಮಾಡಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗ್ರಹಿಸಿದ್ದಾರೆ. 

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಲ್ಲಿ ಭಾರೀ ಮಳೆಯಾಗಿ ಭಾರೀ ಹಾನಿ ಸಂಭವಿಸಿದೆ.ಇದಕ್ಕೆ ಕಾರಣ ಎನು ಅಂತ ಎಲ್ಲರಿಗೂ ಗೊತ್ತಿದೆ. ರಾಜಾಕಾಲುವೆ ಒತ್ತುವರಿ ಇದಕ್ಕೆ ಕಾರಣವಾಗಿದೆ. ಒತ್ತುವರಿ ಬಗ್ಗೆ ತಜ್ಞ ರಾದ ಲಕ್ಷ್ಮಣ್ ರಾವ್ ಸಮಿತಿಯ ವರದಿಯಲ್ಲಿ ಪ್ರಸ್ತಾಪ ಆಗಿದೆ. ಅವರ ವರದಿ ಸರ್ಕಾರದ ಬಳಿ ಇದೆ. ಇಂತಹ ಅನಾಹುತ ತಪ್ಪಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ ಸರ್ಕಾರ ವರದಿ ಜಾರಿ ಬದಲು ಸುಮ್ಮನೆ ಮೊಸಳೆ‌ ಕಣ್ಣಿರು ಹಾಕುವ ಕೆಲಸ ಯಾರು ಮಾಡಬಾರದು ಎಂದು ಹೇಳಿದ್ದಾರೆ. 

ಒತ್ತುವರಿ ತೆರವುಗೊಳಿಸುವುದ ಬಗ್ಗೆ ಸರ್ಕಾರ ಕಠಿಣ ನಿರ್ಧಾರ ಮಾಡಬೇಕಿದೆ. ಒತ್ತುವರಿ ವಿಚಾರದಲ್ಲಿ ಅನೇಕ ರಾಜಕಾರಣಿಗಳು ಇರಬಹುದು. ಕೆರೆಗಳ‌ ಒತ್ತುವರಿ ಬಗ್ಗೆ ಸಹ ವರದಿಯಲ್ಲಿ ಪ್ರಸ್ತಾಪ ಆಗಿದೆ. ಕಂದಾಯ ಸಚಿವರು ಹೊಸ ಕಾಯ್ದೆ ತರುತ್ತೇನೆ ಅಂತ ಹೇಳ್ತಿದ್ದಾರೆ. ಹೀಗಾಗಿ ಬಿಜೆಪಿ. ಕಾಂಗ್ರೆಸ್ ಬಗ್ಗೆ ಆರ್ ಆರ್ ನಗರದ ಜನ ಯೋಚನೆ ಮಾಡಬೇಕಿದೆ ಎಂದು ಅವರು ತಿಳಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೆರೆ ಹಾವಳಿಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇನೆ. ರಾಜಕಾಲುವೆಗಳು ಒತ್ತುವರಿಯಾಗದಂತೆ ಕೆರೆಗಳ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ. ಇಂದು ಎರಡು ರಾಷ್ಟೀಯ ಪಕ್ಷಗಳು ಒಬ್ಬರ ಮೇಲೊಬ್ಬರು ಟೀಕೆ ಮಾಡಿಕೊಳ್ಳುತ್ತಿದ್ದಾರೆ. ಇದೆಲ್ಲವನ್ನು ನೋಡಿದರೆ ಮನಸ್ಸಿಗೆ ತುಂಬಾ ನೋವುಂಟಾ ಗುತ್ತದೆ. ಜನರ ಸಮಸ್ಯೆ ಬಗ್ಗೆ ಇವರುಗಳಿಗೆ ಕಿಂಚಿತ್ತೂ ಕಾಳಜಿ ಇಲ್ಲ. ನಾನು ಈಗ ಇದರ ಬಗ್ಗೆ ಮಾತನಾಡೋದಿಲ್ಲ ಜನರೇ ತೀರ್ಮಾನ ಮಾಡಬೇಕಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT