ರಾಜ್ಯ

ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಇನ್ನೆರಡು ದಿನ ಮಳೆ

Raghavendra Adiga

ಬೆಂಗಳೂರು: ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ತಮಿಳುನಾಡಿನ ಹಲವೆಡೆ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿಯೂ ಕೂಡ ಮಳೆ ಬೀಳಲಿದೆ.

ವಾಯುಭಾರ ಕುಸಿತವು ಉತ್ತರ ತಮಿಳು ನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆ ಮಳೆಗೆ ಕಾರಣವಾಗಿದೆ. ಇದರಿಂದಾಗಿ ರಾಜ್ಯದ ಬೆಳಗಾವಿ, ಗದಗ, ಹಾವೇರಿ, ಧಾರವಾಡ, ದಕ್ಷಿಣ ಒಳನಾಡಿನಲ್ಲಿ ಇನ್ನೂ  ನಾಲ್ಕು ದಿನ ಮಳೆಯಾಗಲಿದೆ ಎಂದು ಸಿಎಸ್ ಪಾಟೀಲ್ ಹೇಳಿದ್ದಾರೆ.
 

SCROLL FOR NEXT