ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: ಭದ್ರಾ ಅಭಯಾರಣ್ಯದಲ್ಲಿ ಹುಲಿ ಸಾವು, ಕಾದಾಟ ಶಂಕೆ

ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. 

ಚಿಕ್ಕಮಗಳೂರು: ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. 

ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಹುಲಿ ಮೃತದೇಹ ಪತ್ತೆಯಾಗಿದ್ದು, 4-5 ದಿನಗಳ ಹಿಂದೆ ಸತ್ತಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಬೇರೊಂದು ಹುಲಿಯೊಂದಿಗೆ ಕಾದಾಟ ನಡೆಸಿದ ವೇಳೆ ಗಾಯಗೊಂಡು ಮೃತಪಟ್ಟಿರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಭದ್ರಾ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ತಾಕತ್ ಸಿಂಗ್ ರಣಾವತ್ ಅವರು ತಿಳಿಸಿದ್ದಾರೆ.

ಮಂಗಳವಾರ ಹುಲಿ ಶವ ಪತ್ತೆಯಾಗಿತ್ತು. ಶಿವಮೊಗ್ಗದಿಂದ ಪಶುವೈದ್ಯರು ಸ್ಥಳಕ್ಕೆ ಬರುವ ಹೊತ್ತಿಗೆ ಸಂಜೆ 6 ಗಂಟೆಯಾಗಿತ್ತು. ಕಾರ್ಯವಿಧಾನಗಳ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹುಲಿಯ ಶವದ ಮೇಲೆ ಹಲ್ಲುಗಳ ಗುರುತುಗಳು ಪತ್ತೆಯಾಗಿವೆ ಎಂದಿದ್ದಾರೆ. 

ಮಿಲನ ಕ್ರಿಯೆ ಮೂಲಕ ಸಾಮಾನ್ಯವಾಗಿ ತನ್ನ ಸಂತತಿಯನ್ನು ಬೆಳೆಸಲು ಹಾಗೂ ಪ್ರಾಬಲ್ಯ ಸಾಧಿಸಲು ಈ ರೀತಿಯ ಕಾದಾಟ ನಡೆಸುವುದು ಸಾಮಾನ್ಯ. ಕಳೆದ ಎರಡು ವರ್ಷಗಳಲ್ಲಿ ಎರಡು ಹುಲಿಗಳು ಸಾವನ್ನಪ್ಪಿವೆ.  2019 ರಲ್ಲಿ ಪತ್ತೆಯಾಗಿದ್ದ ಹುಲಿಯ ಶವ ಸ್ಥಳದಿಂದ 5 ಕಿ.ಮೀ ದೂರದಲ್ಲಿಯೇ ಹೆಣ್ಣು ಹುಲಿಯ ಶವ ಕೂಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT