ಸಾಂದರ್ಭಿಕ ಚಿತ್ರ 
ರಾಜ್ಯ

ಐವರು ಕಳ್ಳ ಬೇಟೆಗಾರರು, ಎರಡು ತಲೆ ಹಾವಿನ ಉರಗ ವಶಕ್ಕೆ

ಎರಡು ತಲೆ ಹಾವಿನ ಒಂದು ಉರಗದೊಂದಿಗೆ ಐವರು ಕಳ್ಳ ಬೇಟೆಗಾರರನ್ನು ಬಂಧಿಸಲಾಗಿದೆ.

ಮೈಸೂರು: ಎರಡು ತಲೆ ಹಾವಿನ ಒಂದು ಉರಗದೊಂದಿಗೆ ಐವರು ಕಳ್ಳ ಬೇಟೆಗಾರರನ್ನು ಬಂಧಿಸಲಾಗಿದೆ.

ಬಂಧಿತರನ್ನು ದೊಡ್ಡಯ್ಯ, ಹೇಮಂತ್, ಯೋಗೇಶ್, ರವಿ ಮತ್ತು ಭರಮಗೌಡ ಎಂದು ಗುರುತಿಸಿರುವುದಾಗಿ ಅರಣ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಆರೋಪಿಗಳು ಹಾವನ್ನು ಕಾರಿನಲ್ಲಿ ಕಳ್ಳಸಾಗಣೆ ಮಾಡುತ್ತಾ ಮೈಸೂರಿಗೆ ಹೊರಟಿದ್ದಾರೆ ಎಂಬ ಸುಳಿವಿನ ಮೇರೆಗೆ ಇಲಾಖೆ ಸಿಬ್ಬಂದಿ ಸಿದ್ದಲಿಂಗಪುರ ಬಳಿ  ಕಾರನ್ನು ತಡೆದು ಸರೀಸೃಪವನ್ನು ವಶಪಡಿಸಿಕೊಂಡಿದ್ದಾಗಿ ಡಿಸಿಎಫ್ ಪೂವಯ್ಯ ತಿಳಿಸಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಮಣ್ಣುಮುಕ್ಕ ಹಾವನ್ನು ರಕ್ಷಿಸಿರುವ ಅರಣ್ಯ ಸಂಚಾರಿ ದಳದ ಪೊಲೀಸರು, ಇದಕ್ಕೆ ಸಂಬಂಧಿಸಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲೆಂದು ಕಾರಿನಲ್ಲಿ ಬರುತ್ತಿದ್ದಾಗ,  ಸಿದ್ದಲಿಂಗಪುರದ ಸಮೀಪ ಅರಣ್ಯ ಸಂಚಾರಿ ದಳದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಲಾಯಿತು. ಈ ಹಾವನ್ನು ಮನೆಯಲ್ಲಿ ಇಟ್ಟುಕೊಂಡರೆ ಕೋಟ್ಯಾಧಿಪತಿಗಳಾಗಬಹುದೆಂದು ದುಷ್ಕರ್ಮಿಗಳು ಸುಳ್ಳು ಸುದ್ದಿ ಹಬ್ಬಿಸಿ, ಮಣ್ಣುಮುಕ್ಕ ಹಾವನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಅರಣ್ಯ  ಸಂಚಾರಿ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮಣ್ಣುಮುಕ್ಕ ಹಾವು ರಕ್ಷಣಾ ಕಾರ್ಯಾಚರಣೆಯನ್ನು ಆರ್‌ಎಫ್‌ಒ ವಿವೇಕ್ ನೇತೃತ್ವದಲ್ಲಿ ಸಿಬ್ಬಂದಿಯಾದ ಲಕ್ಷ್ಮೀಶ, ಮೋಹನ್, ಮಹಂತೇಶ್ ನಾಯಕ, ಕೊಟ್ರೇಶ್, ರವಿಕುಮಾರ್, ರವಿನಂದನ್, ಮಧು, ಪುಟ್ಟಸ್ವಾಮಿ, ವಿರೂಪಾಕ್ಷ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT