ತುಮಕೂರು: ಶಿರಾ ಉಪಚುನಾವಣಾ ಅಖಾಡದಲ್ಲಿ ಕಾಂಚಾಣದ ಸದ್ದು ಜೋರಾಗಿದ್ದು, ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ರೂ.64.40 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್'ಯುವಿ ಕಾರಿನಲ್ಲಿ ಕುಳಿತಿದ್ದ ಮೂವರು ವ್ಯಕ್ತಿಗಳು ಬೆಂಗಳೂರಿನಿಂದ ಚೆನ್ನಗಿರಿಗೆ ತೆರಳುತ್ತಿದ್ದರು. ಈ ವೇಳೆ ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ಕಾರನ್ನು ಪರಿಶೀಲನೆ ನಡೆಸಲಾಗಿದ್ದು, ಕಾರಿನಲ್ಲಿದ್ದ ರೂ.64.4 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜ್ಯದ ಮೂರು ಪಕ್ಷಗಳು ಶಿರಾದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಕೆಲ ಪಕ್ಷಗಳ ಸದಸ್ಯರು ತಮ್ಮ ಅಭ್ಯರ್ಥಿಗಳ ಪರ ಮತ ಹಾಕುವಂತೆ ಜನರಿಗೆ ಹಣ ನೀಡುತ್ತಿದ್ದಾರೆಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.