ಸಂಗ್ರಹ ಚಿತ್ರ 
ರಾಜ್ಯ

ಆರ್'ಆರ್'ನಗರ ಉಪಚುನಾವಣೆ: ಹಿರಿಯ ನಾಗರೀಕರಿಗೆ ಮನೆಯಿಂದಲೇ ಮತ ಹಾಕಲು ಅವಕಾಶ!

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ನ.3 ರಂದು ಉಪ ಚುನಾವಣೆ ನಡೆಯಲಿದೆ. ಕೊರೋನಾ ಸಾಂಕ್ರಾಮಿಕ ರೋಗ ಭೀತಿ ಹಿನ್ನೆಲೆಯಲ್ಲಿ ಹಿರಿಯ ನಾಗರೀಕರಿಗೆ ಮನೆಯಿಂದಲೇ ಮತಹಾಕಲು ಬಿಬಿಎಂಪಿ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ. 

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ನ.3 ರಂದು ಉಪ ಚುನಾವಣೆ ನಡೆಯಲಿದೆ. ಕೊರೋನಾ ಸಾಂಕ್ರಾಮಿಕ ರೋಗ ಭೀತಿ ಹಿನ್ನೆಲೆಯಲ್ಲಿ ಹಿರಿಯ ನಾಗರೀಕರಿಗೆ ಮನೆಯಿಂದಲೇ ಮತಹಾಕಲು ಬಿಬಿಎಂಪಿ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಬಿ ಆಯುಕ್ತ ಮಂಜುನಾಥ ಪ್ರಸಾದ್ ಅವರು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಹಿರಿಯ ನಾಗರೀಕರು ಹಾಗೂ ಅಂಗವಿಕಲರು ಮತದಾನ ನಡೆಯುವ ಕ್ಷೇತ್ರಕ್ಕೇ ಬಂದು ಮತಹಾಕಬೇಕಿಲ್ಲ. ಇದಕ್ಕಾಗಿ ಈಗಗಾಲೇ ತಂಡವೊಂದನ್ನು ರಚಿಸಲಾಗಿದ್ದು. ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಇಂತಹವರ ಮನೆಗಳಿಗೆ ತೆರಳಿ ಮತಪತ್ರಗಳನ್ನು ಸ್ವೀಕರಿಸಲಿದ್ದಾರೆ. 

ಈ ಕಾರ್ಯಾಚರಣೆ ಗುರುವಾರದಿಂದ ಆರಂಬವಾಗಿದ್ದು, ಶನಿವಾರ ಪೂರ್ಣಗೊಳ್ಳಲಿದೆ. ಈಗಾಗಲೇ ಹಿರಿಯ ನಾಗರೀಕರು ಹಾಗೂ ಅಂಕವಿಕಲರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ 488 ಮಂದಿ ಹಿರಿಯ ನಾಗರೀಕರು ಹಾಗೂ 33 ಮಂದಿ ಅಂಗವಿಕಲರು ಇರುವುದಾಗಿ ತಿಳಿದುಬಂದಿದೆ. ಮತದಾನ ಮಾಡುವ ಸಂಪೂರ್ಣ ವಿಡಿಯೋವನ್ನು ಚಿತ್ರೀಕರಿಸಲಾಗುತ್ತದೆ. ಮತದಾನ ಮಾಡಿದ್ದಕ್ಕಾಗಿ ಮತದಾರರಿಗೆ ರಶೀದಿಯನ್ನೂ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಸೋಂಕಿತರಿಗೂ ಮತದಾನಕ್ಕೆ ಅವಕಾಶ
ಇನ್ನು ಕೊರೋನಾ ಸೋಂಕಿತರು, ಪ್ರಾಥಮಿಕ ಮತ್ತು ಪರೋಕ್ಷ ಸಂಪರ್ಕಿತರು ಹಾಗೂ ಸೋಂಕಿನ ಶಂಕೆ ಇರುವ ಮತದಾರರಿಗೆ ಸಂಜೆ 5 ರಿಂದ 6ಗಂಟೆಯವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಸೋಂಕಿತರನ್ನು ಮತಗಟ್ಟೆಗೆ ಕರೆತರಲು 90 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. 

ಈಗಾಗಲೇ ಸೋಂಕು ಪೀಡಿತ ರೋಗಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು. ಮತದಾನದ ದಿನದಂದು ಸೋಂಕಿತರು ಮತದಾನದಿಂದ ವಂಚಿತರಾಗಬಾರದುಎಂಬ ಕಾರಣಕ್ಕೆ ಅವರಿಗೆ ನ.3ರಂದು ಸಂಜೆ 5ರಿಂದ 6ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ರೋಗಿಗಲನ್ನು ಆಸ್ಪತ್ರೆ ಹಾಗೂ ಮನೆಯಿಂದ ಮತಗಟ್ಟೆಗೆ ಕರೆತರುವುದಕ್ಕೆ 90 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರು ಪಿಪಿಇ ಕಿಟ್, ಮಾಸ್ಕ್ ಧರಿಸಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು ಎಂದು ಹೇಳಇದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT