ಪ್ರಚಾರದಲ್ಲಿ ನಟಿ ಅಮೂಲ್ಯ ಹಾಗೂ ದರ್ಶನ್ 
ರಾಜ್ಯ

ರಾಜರಾಜೇಶ್ವರಿ ನಗರ ಉಪಚುನಾವಣೆ: ಮುನಿರತ್ನ ಪರ ಸ್ಟಾರ್ ನಟರ ಭರ್ಜರಿ ಪ್ರಚಾರ

ರಾಜರಾಜೇಶ್ವರಿ ನಗರ ಉಪಚುನಾವಣೆ ಅಖಾಡದ ಕ್ಲೈಮ್ಯಾಕ್ಸ್ ನಲ್ಲಿ ಬಿಜೆಪಿ ಹುರಿಯಾಳು ಹಾಗೂ ಮಾಜಿ ಶಾಸಕ ಮುನಿರತ್ನ ಅವರಿಕೆ ಶಕ್ತಿ ತುಂಬಿದ ನಟ ದರ್ಶನ್ ಅವರು ದಿನವಿಡೀ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು. 

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆ ಅಖಾಡದ ಕ್ಲೈಮ್ಯಾಕ್ಸ್ ನಲ್ಲಿ ಬಿಜೆಪಿ ಹುರಿಯಾಳು ಹಾಗೂ ಮಾಜಿ ಶಾಸಕ ಮುನಿರತ್ನ ಅವರಿಕೆ ಶಕ್ತಿ ತುಂಬಿದ ನಟ ದರ್ಶನ್ ಅವರು ದಿನವಿಡೀ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು. 

ಪ್ರಚಾರದುದ್ದಕ್ಕೂ ಎಲ್ಲಿಯೂ ಕೂಡ ವಿರೋಧಿ ಅಭ್ಯರ್ಥಿ ಹೆಸರು ಪ್ರಸ್ತಾಪಿಸದೆ, ವಿರೋಧಿಗಳ ಮಾತುಗಳಿಗೆ ಪ್ರತಿಕ್ರಿಯಿಸದೆ, ಟೀಕೆಗಳಿಗೆ ಟಾಂಗ್ ನೀಡದೆ ದರ್ಶನ್, ತಮ್ಮ ಎಂದಿನ ಶೈಲಿಯಲ್ಲಿಯೇ ಮುಗುಳು ನಗೆ ಬೀರುತ್ತಾ ಮುನಿರತ್ನ ಗೆಲುವಿಗೆ ಮತದಾರರಲ್ಲಿ ಮೊರೆಯಿಟ್ಟರು. 

ಕೊರೋನಾ ಕಾಲದಲ್ಲಿ ಆರ್.ಆರ್.ನಗರ ಕ್ಷೇತ್ರದ ಜನರ ನೋವಿಗೆ ಮುನಿರತ್ನ ಸ್ಪಂದಿಸಿದ್ದಾರೆ. ಈ ಮಾನವೀಯತೆ ಗುಣಕ್ಕಾಗಿ ಚುನಾವಣೆಯಲ್ಲಿ ಅವರ ಪರ ನಾನು ಪ್ರಚಾರ ನಡೆಸುತ್ತಿದ್ದೇನೆಂದು ಭಾಷಣದಲ್ಲಿ ದರ್ಶನ್ ಅವರು ಹೇಳಿದ್ದಾರೆ. 

ನಾನಿಲ್ಲಿ ಯಾವುದೇ ಪಕ್ಷದ ಪರ ಮತಯಾಚನೆ ಮಾಡಲು ಬಂದಿಲ್ಲ. ವೈಯಕ್ತಿಕವಾಗಿ ಮುನಿರತ್ನ ಅವರು ಗೊತ್ತಿರುವುದರಿಂದ ಅವರ ಪರವಾಗಿ ಮತಯಾಚನೆ ಮಾಡುತ್ತಿದ್ದೇನೆಂದು ತಿಳಿಸಿದ್ದಾರೆ. 

ದರ್ಶನ್ ಅವರಗೊಂದಿಗೆ ನಟಿ ಅಮೂಲ್ಯ ಹಾಗೂ ನಿರ್ಮಾಪಕ ರಾಕ್'ಲೈನ್ ವೆಂಕಟೇಶ್ ಕೂಡ ರೋಡ್ ಶೋ ನಡೆಸಿ ಮುನಿರತ್ನ ಪರ ಮತಯಾಚನೆ ಮಾಡಿದರು. 

ಇದೇ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಇತರೆ ನಾಯಕರು ರಾಜರಾಜೇಶ್ವರಿ ನಗರ, ಪೀಣ್ಯ, ಜಾಲಹಳ್ಳಿ ಹಾಗೂ ಇತರೆ ಪ್ರದೇಶಗಳಲ್ಲೂ ಪ್ರಚಾರ ನಡೆಸಿದರು. 

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂದು ನೀವು ಮುನಿರತ್ನ ಅವರಿಗೆ ಮತ ಹಾಕಿದ್ದೇ ಆದರೆ, ಮುಂದೆ ನೀವು ಕೆಟ್ಟ ದಿನಗಳನ್ನು ನೋಡಲಿದ್ದೀರಿ. ಕಾಂಗ್ರೆಸ್ ನಿಂದಾಗಿ ಈ ಹಿಂದೆ ಎರಡು ಬಾರಿ ಮುನಿರತ್ನ ಅವರು ಗೆಲುವು ಸಾಧಿಸಿದ್ದರು ವೈಯಕ್ತಿಕ ಕೆಲಸಗಳಿಂದಾಗಿ ಅಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್.ನಗರ ಕ್ಷೇತ್ರ ಅಭಿವೃದ್ಧಿಗಾಗಿ ರೂ.2,000 ಕೋಟಿ ಬಿಡುಗಡೆ ಮಾಡಿದ್ದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT