ಗುಂಡೇಟು ತಿಂದ ಆರೋಪಿ 
ರಾಜ್ಯ

ಚನ್ನರಾಯಪಟ್ಟಣ ಜೋಡಿ ಕೊಲೆ ಪ್ರಕರಣ:  ನಸುಕಿನ ಜಾವ ಪೋಲೀಸ್ ಫೈರಿಂಗ್, ಆರೋಪಿ ಬಂಧನ

ಚನ್ನರಾಯಪಟ್ಟಣ ವೃದ್ದ ದಂಪತಿಗಳ ಜೋಡಿ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿದ ಪೋಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಸನ: ಚನ್ನರಾಯಪಟ್ಟಣ ವೃದ್ದ ದಂಪತಿಗಳ ಜೋಡಿ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿದ ಪೋಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಭಾನುವಾರ ಚನ್ನರಾಯಪಟ್ಟಣದಲ್ಲಿ ನಡೆದ ಮುರುಳಿಧರ್ (71), ಉಮಾದೇವಿ (67)  ಎಂಬ ವೃದ್ದ ದಂಪತಿಗಳ ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳವಾರ ನಸುಕಿನ ವೇಳೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆರೋಪಿ ಪ್ರಸಾದ್ ಅಲಿಯಾಸ್ ಗುಂಡ ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.  ಆಗ ಆತ್ಮರಕ್ಷಣೆಗಾಗಿ ಪೋಲೀಸರು ಆರೋಪಿಯ ಎಡಗಾಲಿನ ಮಂಡಿ ಭಾಗಕ್ಕೆ ಗುಂಡು ಹಾರಿಸಿ ಹಿಡಿದಿದ್ದಾರೆ. 

ಪ್ರಕರಣ ವಿವರ

ಮೃತ ದಂಪತಿಗಳಾದ ಮುರುಳಿಧರ್  ಹಾಗೂ ಉಮಾದೇವಿ ಅವರಿಗೆ ಮಕ್ಕಳಿರಲಿಲ್ಲ. ಆದರೆ ಮುರಳಿಧರ್ ಸ್ವಾತಂತ್ರ್ಯ ಹೋರಾಟಗಾರ ಕೃಷ್ಣಮೂರ್ತಿ ಎಂಬುವವರ ಪುತ್ರರಾಗಿದ್ದು ಸರ್ಕಾರ ಅವರಿಗೆ 80 ಎಕರೆ ಜಮೀನು ನಿಡಿತ್ತು. ಕೃಷಿಯಲ್ಲಿ ಆಸಕ್ತಿ ಹೊಂದಿದ್ದ ಮುರಳಿಧರ್  ಅದೇ ಜಮೀನಿನಲ್ಲಿ ಬೇಸಾಯ ಮಾಡಿಕೊಂಡು ವಾಸ್ತವ್ಯವಿದ್ದರು.  ಆದರೆ ಇತ್ತೀಚೆಗೆ ಜಮೀನನ್ನು ಮಾರಿದ್ದರೆನ್ನಳಾಗಿದ್ದು ಆ ಹಣವನ್ನು ಮನೆಯಲ್ಲೇ ಇರಿಸಿಕೊಂಡಿದ್ದಾರೆ ಎನ್ನಲಾಗಿತ್ತು.

ಇದನ್ನು ಅರಿತ ದುಷ್ಕರ್ಮಿಗಳೂ ಮನೆಗೆ ನುಗ್ಗಿ ದಂಪತಿಯನ್ನು ಕೊಂದು ದರೋಡೆ ಮಾಡಿದ್ದರು. 

ಚನ್ನರಾಯಪಟ್ಟಣದಲ್ಲಿ ಕಳೆದೊಂದು ತಿಂಗಳ ಅವಧಿಯಲ್ಲಿ ಆರು ಕೊಲೆಗಳಾಗಿದ್ದು ಓರ್ವ ಪೋಲೀಸ್ ಅಧಿಕಾರಿ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT