ಡಿಜೆ ಹಳ್ಳಿಯಲ್ಲಿ ಸಿದ್ದರಾಮಯ್ಯ ಪರಿಶೀಲನೆ 
ರಾಜ್ಯ

ಗಲಭೆ ನಡೆದಿದ್ದ ಡಿ.ಜೆ ಹಳ್ಳಿ ಠಾಣೆಗೆ ಸಿದ್ದರಾಮಯ್ಯ ಭೇಟಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ!

ಬೆಂಗಳೂರು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ತಪ್ಪಿತಸ್ಥರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ತಪ್ಪಿತಸ್ಥರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗಲಭೆ ನಡೆದಿದ್ದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಅಧಿಕಾರಿಗಳಿಂದ ಪ್ರಕರಣದ ಮಾಹಿತಿ ಕಲೆಹಾಕಿದರು. ಈ ವೇಳೆ ಸಂಪೂರ್ಣ ಪ್ರಕರಣದ ಪೂರ್ವಾಪರ ಪರಿಶೀಲಿಸಿದ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಸಿಹಿದರು.

ಅಂತೆಯೇ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್ ಠಾಣೆಗೆ ಭೇಟಿನೀಡಿ, ಡಿಸಿಪಿ ಶರಣಪ್ಪ ಅವರಿಂದ ಘಟನೆಯ ಮಾಹಿತಿ ಪಡೆದುಕೊಂಡೆ. ಈ ವೇಳೆ ಶಾಸಕರಾದ ರಿಜ್ವಾನ್ ಅರ್ಷದ್, ನಸೀರ್ ಅಹ್ಮದ್, ವೆಂಕಟರಮಣಪ್ಪ ಅವರು ಸೇರಿದಂತೆ ಹಲವರು ಜೊತೆಗಿದ್ದರು. ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್‌ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಒಂದುವೇಳೆ ಪ್ರವಾದಿ ಮಹಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್‌ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ. ಗಲಭೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಗಲಭೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಅಂತೆಯೇ ಪ್ರಕರಣದಲ್ಲಿ ಭಾಗಿಯಾಗದ ಹಲವರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಯಾರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ, ಯಾರು ನಿರಪರಾಧಿಗಳಿದ್ದಾರೆ ಅಂಥವರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ನೈಜ ಅಪರಾಧಿಗಳು ಯಾರೇ ಆಗಿರಲಿ ಅಂಥವರ  ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದೂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT