ಪ್ಲಾಸ್ಮಾ 
ರಾಜ್ಯ

ಜೀವ ಉಳಿಸಲು ಏರ್ ಲಿಫ್ಟ್: ಬೆಂಗಳೂರಿನಿಂದ ಜಮ್ಮು ಕಾಶ್ಮೀರದ ಶ್ರೀನಗರ ತಲುಪಿತು ಪ್ಲಾಸ್ಮಾ

ರೋಗಿಯ ಜೀವ ಉಳಿಸಲು ಹೃದಯ ಮತ್ತು ಇತರ ಪ್ರಮುಖ ಭಾಗಗಳನ್ನು ತುರ್ತಾಗಿ ವರ್ಗಾಯಿಸುವುದನ್ನು ನೋಡಿದ್ದೇವೆ. ಅದರೆ, ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತ 60 ವರ್ಷದ ಮಹಿಳೆಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ವಿಮಾನದ ಮೂಲಕ ನಗರದಿಂದ ಪ್ಲಾಸ್ಮಾವನ್ನು ಜಮ್ಮು ಕಾಶ್ಮೀರಕ್ಕೆ ರವಾನಿಸಲಾಗಿದೆ.‌

ಬೆಂಗಳೂರು: ರೋಗಿಯ ಜೀವ ಉಳಿಸಲು ಹೃದಯ ಮತ್ತು ಇತರ ಪ್ರಮುಖ ಭಾಗಗಳನ್ನು ತುರ್ತಾಗಿ ವರ್ಗಾಯಿಸುವುದನ್ನು ನೋಡಿದ್ದೇವೆ. ಅದರೆ, ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತ 60 ವರ್ಷದ ಮಹಿಳೆಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ವಿಮಾನದ ಮೂಲಕ ನಗರದಿಂದ ಪ್ಲಾಸ್ಮಾವನ್ನು ಜಮ್ಮು ಕಾಶ್ಮೀರಕ್ಕೆ ರವಾನಿಸಲಾಗಿದೆ.‌

ಈಮಹಿಳೆ ಶ್ರೀನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಕೆಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಆಕೆಯ ಸಂಬಮಧಿಕರು ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿನ ಪ್ಲಾಸ್ಮಾ ಬ್ಯಾಂಕ್‌ ಸಂಪರ್ಕಿಸಿದ್ದರು. 

ಈ ಹಿನ್ನೆಲೆಯಲ್ಲಿ  ಪ್ಲಾಸ್ಮಾ ಬ್ಯಾಂಕ್‌ನ ಮುಖ್ಯಸ್ಥ ಡಾ. ವಿಶಾಲ್ ರಾವ್ ನೇತೃತ್ವದ ವೈದ್ಯರ ತಂಡವು ಎರಡು ಯುನಿಟ್‌ ಪ್ಲಾಸ್ಮಾವನ್ನು 3 ಸಾವಿರ ಕಿ.ಮೀ. ದೂರದಲ್ಲಿರುವ ರೋಗಿಗೆ ಇಂಡಿಗೋ ಕಾರ್ಗೊ ವಿಮಾನದ ಮೂಲಕ ಮಂಗಳವಾರ ತಲುಪಿಸಿದೆ. ವಿಮಾನವು ಬೆಂಗಳೂರಿನಿಂದ ದೆಹಲಿ ತಲುಪಿ, ಶ್ರೀನಗರ ತಲುಪಿದೆ. ಅಲ್ಲಿನ ವೈದ್ಯರು ಮಹಿಳೆಗೆ ಪ್ಲಾಸ್ಮಾ ಥೆರಪಿಯನ್ನು ಪ್ರಾರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT