ಸಂಗ್ರಹ ಚಿತ್ರ 
ರಾಜ್ಯ

ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ 

ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ.

ಬೆಂಗಳೂರು: ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ.

ನವೀನ್ ಎನ್ನುವ ವ್ಯಕ್ತಿ ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ರಾತ್ರೋ ರಾತ್ರಿ ವಾಹನಗಳು ಹಾಗೂ ಶಾಸಕರ ಮನೆಗೂ ಬೆಂಕಿ ಹಚ್ಚಿ ಗಲಭೆ ನಡೆಸಿದ್ದರು.

ಈ ಗಲಭೆಯಲ್ಲಿ ಎಸ್‍ಡಿಪಿಐ ಪಾತ್ರ ಇದೆ ಎನ್ನುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಈ ಸಂಘಟನೆಯನ್ನು ನಿಷೇಧ ಮಾಡಬೇಕೆಂಬ ಒತ್ತಡವೂ ಬಂದಿತ್ತು. ಅಲ್ಲದೇ ಗಲಭೆಯಲ್ಲಿ ಕಾಂಗ್ರೆಸ್ ನಾಯಕರ ಪಾತ್ರ ಇದೆ ಎನ್ನುವ ಅನುಮಾನವಿದ್ದು, ಈ ಕುರಿತು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆ ನಡೆಸುತ್ತಿದ್ದು, ಇದುವರೆಗೂ ಗಲಭೆಯಲ್ಲಿ 300 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT