ರಾಜ್ಯ

ರಾಯಚೂರು: ಅಂತ್ಯಕ್ರಿಯೆ ಮುಗಿಸಿ ಬರುವಾಗ ಭೀಕರ ಅಪಘಾತ. 3 ಸಾವು

Raghavendra Adiga

ರಾಯಚೂರು: ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಬಳಿ ನಡೆದಿದೆ. 

ಅಂತ್ಯಸಂಸ್ಕಾರ ಮುಗಿಸಿ ಬರುವಾಗ ನಡೆದ ಅಪಘಾತದಲ್ಲಿ ಪದ್ದಮ್ಮ (40), ಅಂಬಣ್ಣ (65), ರಾಮಣ್ಣ(99) ಎನ್ನುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಕಾರು ಚಾಲಕ, ಶಿವನಗೌಡ ಹಾಗೂ ಗುಂಡಪ್ಪ ಎಂಬಿಬ್ಬರೂ ಸಹ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರೆಲ್ಲಾ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವರಾಜ್ ಎನ್ನುವವರ ಅಂತ್ಯ ಸಂಸ್ಕಾರಕ್ಕೆ ತೆರಳಿದ್ದರೆನ್ನಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
 

SCROLL FOR NEXT