ಪ್ರಜ್ವಲ್ ರೇವಣ್ಣ 
ರಾಜ್ಯ

ಪ್ರಜ್ವಲ್ ರೇವಣ್ಣ ಅಫಿಡವಿಟ್ ವಿವಾದ: ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಚುನಾವಣಾ ಆಯೋಗ ಸೂಚನೆ

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ವಿಚಾರವಾಗಿ ವರದಿ ಸಲ್ಲಿಸುವಂತೆ ದಾಖಲಿಸಿರುವ ದೂರಿನ ಅನ್ವಯ ಆಯೋಗವು ಸೂಕ್ತ ವರದಿ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ನ್ಯಾಯಸಮ್ಮತ ವರದಿ ಸಲ್ಲಿಸಿವಂತೆ ಮಾಜಿ ಸಚಿವ ಹಾಗೂ ಕಳೆದ ಲೋಕಸಭಾ ಚುನಾವಣೆಯ ಪರಾಜಿತ...

ಹಾಸನ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ವಿಚಾರವಾಗಿ ವರದಿ ಸಲ್ಲಿಸುವಂತೆ ದಾಖಲಿಸಿರುವ ದೂರಿನ ಅನ್ವಯ ಆಯೋಗವು ಸೂಕ್ತ ವರದಿ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ನ್ಯಾಯಸಮ್ಮತ ವರದಿ ಸಲ್ಲಿಸಿವಂತೆ ಮಾಜಿ ಸಚಿವ ಹಾಗೂ ಕಳೆದ ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಎ.ಮಂಜು ಅವರು ಮನವಿ ಮಾಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ತಮ್ಮ ಆದಾಯಗಳನ್ನು ಮುಚ್ಚಿಟ್ಟು ನಕಲಿ ಆದಾಯ ದೃಢಿಕರಣ ಪತ್ರ ನೀಡಿದ್ದರು. ಈ ವಿಚಾರವಾಗಿ ನಾನು ಕೇಂದ್ರ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದ್ದೆ. ಇದನ್ನು ವಿಚಾರಣೆ ನಡೆಸುತ್ತಿರುವ ಆಯೋಗ ಈ ಸಂಬಂಧ ದಾಖಲಾತಿಗಳನ್ನು ಪರಿಶೀಲಿಸಿ ಸೂಕ್ತ ವರದಿ ನೀಡುವಂದೆ ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ಸೂಕ್ತ ದಾಖಲಾತಿಗಳನ್ನು ಒಳಗೊಂಡ ವರದಿಯನ್ನು ನೀಡುವಂತೆ ಮನವಿ ಮಾಡಿದರು. 

ಚುನಾವಣಾ ಆಯೋಗಕ್ಕೆ ಹೀಗೆ ನಕಲಿ ದಾಖಲೆ ಸಲ್ಲಿಸಿ ನಂತರ ಸದಸ್ಯತ್ವವೇ ವಜಾಗೊಂಡ ಉದಾಹರಣಗಳಿವೆ. ಈ ಪ್ರಕರಣದಲ್ಲೂ ಹೀಗೇ ಆಗಲಿದೆ. ಹಾಗಾಗಿ ಮತ್ತೆ ನಾನೇ ಸಂಸದನಾಗುತ್ತೇನೆಂದು ಮಂಜು ಅವರು ವಿಶ್ವಾಸ ವ್ಯಕ್ತಪಡಿಸಿದರು. 

ಪ್ರಜ್ವಲ್ ರೇವಣ್ಣ ಅವರು ನಾಪತ್ರದೊಂದಿಗೆ ಸಲ್ಲಿಸಿರುವ ಆದಾಯ ದೃಢೀಕರಣ ಪತ್ರದಲ್ಲಿ ತಮ್ಮ ಆದಾಯದ ಕೆಲವೊಂದು ಅಂಶಗಳನ್ನು ಮರೆಮಾಚಿದ್ದಾರೆ. ಈ ಅಂಶವನ್ನು ಪರಿಗಣಿಸಿ ನಾನು 2019ರಲ್ಲಿಯೇ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೆ. ಈ ಪ್ರಕರಣದಲ್ಲಿ ನನಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT