ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್ -19: ಪ್ಲಾಸ್ಮಾ ಚಿಕಿತ್ಸೆ ಪಡೆದ ಶೇ. 60 ರಷ್ಟು ರೋಗಿಗಳು ಗುಣಮುಖ

ತೀವ್ರ ಮತ್ತು ಗಂಭೀರ ಪರಿಸ್ಥಿತಿಯಲ್ಲಿರುವ ಕೋವಿಡ್-19 ರೋಗಿಗಳಿಗೆ ನೀಡಲಾದ ಪ್ಲಾಸ್ಮಾ ಚಿಕಿತ್ಸೆಯಲ್ಲಿ ಶೇ.60 ರಷ್ಟು  ರೋಗಿಗಳು  ಗುಣಮುಖರಾಗಿದ್ದಾರೆ.

ಬೆಂಗಳೂರು: ತೀವ್ರ ಮತ್ತು ಗಂಭೀರ ಪರಿಸ್ಥಿತಿಯಲ್ಲಿರುವ ಕೋವಿಡ್-19 ರೋಗಿಗಳಿಗೆ ನೀಡಲಾದ ಪ್ಲಾಸ್ಮಾ ಚಿಕಿತ್ಸೆಯಲ್ಲಿ ಶೇ.60 ರಷ್ಟು  ರೋಗಿಗಳು  ಗುಣಮುಖರಾಗಿದ್ದಾರೆ.ಬೆಂಗಳೂರು ಮೆಡಿಕಲ್ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆಯಡಿಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಹೆಚ್ ಸಿಜಿ ಆಸ್ಪತ್ರೆಯ ಡಾ. ಯುಎಸ್ ವಿಶಾಲ್ ರಾವ್ 354 ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿದ್ದಾರೆ.

ಸಮಗ್ರ ವಿಶ್ಲೇಷಣೆಯನ್ನು ಮಾಡಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಆದಾಗ್ಯೂ, ಪ್ರಸ್ತುತ ವಿಶ್ಲೇಷಣೆ ಪ್ರಕಾರ ಶೇ. 60 ರಷ್ಟು ರೋಗಿಗಳು ಗುಣಮುಖರಾಗಿದ್ದಾರೆ ಇದೊಂದು ದೊಡ್ಡ ವಿಷಯವಾಗಿದೆ.  ಪ್ಲಾಸ್ಮಾ ಚಿಕಿತ್ಸೆ ವೇಳೆಯಲ್ಲಿ ಇವರಲ್ಲಿ ಶೇ. 90 ರಷ್ಟು ಮಂದಿ ವೆಂಟಿಲೇಟರ್ ನಲ್ಲಿದ್ದರು. ಈವರೆಗೂ 193 ಮಂದಿ ಪ್ಲಾಸ್ಮಾ ದಾನ ಮಾಡಿದ್ದಾರೆ ಎಂದು ಡಾ. ವಿಶಾಲ್ ರಾವ್ ತಿಳಿಸಿದ್ದಾರೆ.

ಕೋವಿಡ್-19 ರೋಗದಿಂದ ಗುಣಮುಖರಾದವರಿಂದ ಪ್ಲಾಸ್ಮಾವನ್ನು (ರಕ್ತ) ಪಡೆದು ಗಂಭೀರ ಸ್ಥಿತಿಯಲ್ಲಿರುವ ಕೊರೋನಾ ಪಾಸಿಟಿವ್ ರೋಗಿಗಳಿಗೆ ನೀಡಲಾಗುತ್ತದೆ. ಪ್ಲಾಸ್ಮಾದಲ್ಲಿರುವ ರೋಗ ನಿರೋಧಕ ಶಕ್ತಿಯಿಂದ ಕೋರಾನಾ ವಿರುದ್ಧ ಹೋರಾಡಲು ಸಾಧ್ಯವಾಗಲಿದೆ. 24 ಗಂಟೆಯಿಂದ ವಾರದೊಳಗೆ ಇದರ ಫಲಿತಾಂಶವನ್ನು ನಾವು ನೋಡಬಹುದಾಗಿದೆ.

ವೆಂಟಿಲೇಟರ್ ನಲ್ಲಿದ್ದ ರೋಗಿಯೊಬ್ಬರಿಗೆ ರೆಮ್ಡಿಸಿವಿರ್ ನೀಡಿದಾಗ ಯಾವುದೇ ಕೆಲಸ ಮಾಡಲಿಲ್ಲ. ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿದ ಬಳಿಕ ಮಾರನೇ ದಿನವೇ ಅವರಿಗೆ ವೆಂಟಿಲೇಟರ್ ತೆಗೆಯಲಾಯಿತು. ಮೂರನೇ ದಿನ ಆಕ್ಸಿಜನ್ ನಿಂದ ಮುಕ್ತಗೊಳಿಸಲಾಯಿತು. ಐದನೇ ದಿನ ಕೋವಿಡ್ ನೆಗೆಟಿವ್ ಬಂದಿತ್ತು. ನಂತರ ಆಸ್ಪತ್ರೆಯಿಂದ ಬಿಡುಗಡೆಗೆ ಸಿದ್ಧರಾದರು ಎಂದು ಡಾ. ರಾವ್ ವಿವರಿಸಿದರು.

ಹೆಚ್ ಸಿಜಿ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲಾಗಿದ್ದು, ಪ್ರತಿದಿನ ಇದಕ್ಕಾಗಿ ಸುಮಾರು 20 ಕರೆಗಳು ಬರುತ್ತಿವೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಸುವುದು ಕಷ್ಟಸಾಧ್ಯ.ಪ್ರತಿ ಜಿಲ್ಲೆಯಲ್ಲೂ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಬೇಕೆಂದು ಅವರು ಸಲಹೆ ನೀಡಿದ್ದಾರೆ.

ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಫಲಿತಾಂಶ ಮೌಲ್ಯಮಾಪನ ಮಾಡಿ ನಂತರ ಮೂರನೇ ಪ್ರಯೋಗವನ್ನು ಆರಂಭಿಸಲಾಗುವುದು, ಕ್ಲಿನಿಕಲ್ ಪ್ರಯೋಗ ಹೊರತುಪಡಿಸಿದಂತೆ ಆದೇ ಸಂದರ್ಭ 300 ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತದೆ. ಈ ರೀತಿಯ ಗುಣಮುಖದ ಟ್ರೆಂಡಿನ ಮೇಲೆ ನಿಗಾ ವಹಿಸಲಾಗಿದೆ. 60ರಿಂದ 70 ರೋಗಿಗಳು ಐಸಿಯುನಿಂದ ಹೊರಬರುತ್ತಿದ್ದು,  40ರಿಂದ 45 ಜನರು ಬಿಡುಗಡೆಯಾಗುತ್ತಿದ್ದಾರೆ ಎಂದು ಹೆಚ್ ಸಿಜಿ ಆಸ್ಪತ್ರೆಯ ವೈದ್ಯೆ ಡಾ. ಶಾಲಿನಿ
ಠಾಕೂರ್ ತಿಳಿಸಿದ್ದಾರೆ.

ಹೆಚ್ ಸಿಜಿ ಆಸ್ಪತ್ರೆಯಿಂದ ರಾಜ್ಯದ ಇತರ ಜಿಲ್ಲೆಗಳು ಸೇರಿದಂತೆ ತಮಿಳುನಾಡು, ಶ್ರೀನಗರ ಮತ್ತು ಆಂಧ್ರಪ್ರದೇಶಗಳಿಗೆ ಪ್ಲಾಸ್ಮಾವನ್ನು ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT