ರಾಜ್ಯ

ಶೀಘ್ರದಲ್ಲೇ ರಾಜ್ಯ ಸಂಪುಟ ವಿಸ್ತರಣೆ: ಎಂಟಿಬಿ ನಾಗರಾಜ್

Manjula VN

ಮಾಲೂರು: ಮುಂದಿನ 15 ದಿನಗಳಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂದು ಎಂಎಲ್'ಸಿ ಎಂಟಿಬಿ ನಾಗರಾಜ್ ಅವರು ಶನಿವಾರ ಹೇಳಿದ್ದಾರೆ. 

ಚಿಕ್ಕ ತಿರುಪತಿಯಲ್ಲಿ ವಿವಾಹ ಸಭಾಂಗಣವೊಂದಕ್ಕೆ ಚಾಲನೆ ನೀಡಿದ ಬಳಿಕ ಮಾಡನಾಡಿದ ಅವರು, ಮುಂದಿನ ವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ವಿಸ್ತರಣೆ ಮಾಡಲು ಪಕ್ಷದ ಹೈಕಮಾಂಡ್ ನಿಂದ ಅನುಮತಿ ಪಡೆಯಲಿದ್ದಾರೆಂದು ಹೇಳಿದ್ದಾರೆ. 

ಪರಿಷತ್ ಸದಸ್ಯರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಹೈಕಮಾಂಡ್'ಗೆ ಬಿಟ್ಟದ್ದಾಗಿದೆ ಎಂದ ಅವರು, ತಾವು ಸಚಿವರಾಗುವ ಕುರಿತು ಸುಳಿವು ನೀಡಿದ್ದಾರೆ. 

SCROLL FOR NEXT