ಅಪ್ಪಾಜಿ ಗೌಡ 
ರಾಜ್ಯ

ಸರ್ಕಾರಿ ಆಸ್ಪತ್ರೆಯಲ್ಲಿನ ವೆಂಟಿಲೇಟರ್ ಕೊರತೆಯಿಂದಾಗಿ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದರು: ಜೆಡಿಎಸ್ ನಾಯಕ 

ಸರ್ಕಾರಿ ಆಸ್ಪತ್ರೆಯಲ್ಲಿ ಎದುರಾಗಿದ್ದ ವೆಂಟಿಲೇಟರ್ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದ್ದರು ಎಂದು ಜೆಡಿಎಸ್ ನಾಯಕ ವೈಎಸ್'ವಿ ದತ್ತ ಅವರು ಹೇಳಿದ್ದಾರೆ. 

ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಯಲ್ಲಿ ಎದುರಾಗಿದ್ದ ವೆಂಟಿಲೇಟರ್ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದ್ದರು ಎಂದು ಜೆಡಿಎಸ್ ನಾಯಕ ವೈಎಸ್'ವಿ ದತ್ತ ಅವರು ಹೇಳಿದ್ದಾರೆ. 

ಮಾಜಿ ಶಾಸಕ ಎಂ.ಜೆ ಅಪ್ಪಾಜಿಗೌಡರ ಸಾವು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಪಾಠವಾಗಬೇಕು. ಸಕಾಲಕ್ಕೆ ಅಪ್ಪಾಜಿಗೌಡ ಅವರಿಗೆ ಚಿಕಿತ್ಸೆ ದೊರೆಯದಿರುವುದರಿಂದಲೇ ಮೃತಪಟ್ಟಿದ್ದಾರೆ. ಬಹುಶಃ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಕಾಲಕ್ಕೆ ವೆಂಟಿಲೇಟರ್ ಹಾಗೂ ಚಿಕಿತ್ಸೆ ನೀಡಿದ್ದರೆ ಅವರು ಬದುಕುತ್ತಿದ್ದರು. ಆದರೆ, ಸಕಾಲಕ್ಕೆ ಚಿಕಿತ್ಸೆ ದೊರಕದೆ ಗೌಡರು ಮೃತಪಡಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಅಪ್ಪಾಜಿಗೌಡರಿಗೆ ಉಸಿರಾಟದ ತೊಂದರೆ ಕಂಡುಬಂದ ಕೂಡಲೇ ಅವರ ಸಂಬಂಧಿಕರು ಮತ್ತು ಗೆಳೆಯರು ಇಡೀ ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಗಳಿಗೆಲ್ಲ ಸುತ್ತಾಡಿಕೊಂಡು ಬಂದರಾದರೂ ಸ್ಪಂದನೆ ದೊರಕಲಿಲ್ಲ ಎಂಬ ದೂರು ಕೇಳಿಬಂದಿದೆ. ಅಲ್ಲದೆ, ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ಚಿಕಿತ್ಸೆ ನೀಡಲಿಲ್ಲ. ಕೊನೆಗೆ ಮೆಗ್ಗಾನ್ ಆಸ್ಪತ್ರೆಗೆ ಬಂದರೂ ಕೂಡ ಅಲ್ಲಿಯೂ ವೆಂಟಿಲೇಟರ್ ದೊರಕಲಿಲ್ಲ. ಈ ಕಾರಣಕ್ಕಾಗಿಯೇ ಅಪ್ಪಾಜಿಗೌಡರು ಮೃತಪಡುವಂತಾಯಿತು. ಹೀಗಾಗಿ ಅಪ್ಪಾಜಿಗೌಡರ ಸಾವಿಗೆ ಜಿಲ್ಲಾಡಳಿತವೇ ಹೊಣೆ ಹೊರಬೇಕು ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT