ರಾಜ್ಯ

ಹಾಸನದಲ್ಲಿ ವೃದ್ಧ ದಂಪತಿ ಹತ್ಯೆ: ಮತ್ತೆ ಆರು ಆರೋಪಿಗಳ ಬಂಧನ

Lingaraj Badiger

ಹಾಸನ: ವೃದ್ಧ ದಂಪತಿಯನ್ನು ಹತ್ಯೆ ಮಾಡಿ ಹಣ, ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಮತ್ತೆ ಆರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಚನ್ನರಾಯಪಟ್ಟಣದ ಮಂಜಶೆಟ್ಟಿ(23), ಪ್ರಸಾದ್(25), ನಂದನ್ ಕುಮಾರ್(33), ಯೋಗಾನಂದ(29), ಭರತ್(24) ಹಾಗೂ ಮಧು(25) ಬಂಧಿತ ಆರೋಪಿಗಳಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರು ನೀಡಿದ ಆರೋಪದ ಮೇಲೆ ಇಂದು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ನಗರದ ಹೊರವಲಯದ ಆಲಗೋಡನಹಳ್ಳಿ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿಗಳಾದ ಮುರುಳೀಧರ್(71) ಹಾಗೂ ಉಮಾದೇವಿ(67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

SCROLL FOR NEXT