ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜ್ಯ

ಚಳಿಗಾಲದ ಅಧಿವೇಶನಕ್ಕೆ ಬರುವ ಶಾಸಕರು,ಸಚಿವರು,ಮಾಧ್ಯಮದವರಿಗೆ ಕೊರೋನಾ ಟೆಸ್ಟ್ ಕಡ್ಡಾಯ : ಸ್ಪೀಕರ್ ಕಾಗೇರಿ

ಇದೇ ತಿಂಗಳ 21 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು,ಸಚಿವ ರು,ಶಾಸಕರು, ಅಧಿಕಾರಿಗಳು,ಮಾಧ್ಯಮದವರೂ ಸೇರಿದಂತೆ ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರು ಕೋವಿಡ್ ಟೆಸ್ಟ್ ಮಾಡಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಬೆಂಗಳೂರು: ಇದೇ ತಿಂಗಳ 21 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು,ಸಚಿವ ರು,ಶಾಸಕರು, ಅಧಿಕಾರಿಗಳು,ಮಾಧ್ಯಮದವರೂ ಸೇರಿದಂತೆ ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರು ಕೋವಿಡ್ ಟೆಸ್ಟ್ ಮಾಡಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಧಿವೇಶನ ಆರಂಭಕ್ಕೆ ಮೂರು ದಿನದ ಮೊದಲೇ ಪ್ರತಿಯೊಬ್ಬರು ಕೋವಿಡ್ ಟೆಸ್ಟ್ ಮಾಡಿಸಿ ದಾಖಲೆ ತರುವುದು ಕಡ್ಡಾಯಗೊಳಿಸಲಾಗಿದೆ.ಸೆಪ್ಟಂಬ ರ್ 21 ರಿಂದ 30 ರವರೆಗೆ ಕಲಾಪ ನಡೆಯಲಿದೆ.ವಿಧಾನಸಭೆಯ ಕಲಾಪದಲ್ಲಿ ಪಾಲ್ಗೊಳ್ಳುವವರಿಗೆ ಕೋವಿಡ್ ಟೆಸ್ಟ್ ಅನ್ವಯವಾಗುತ್ತದೆ.ಜಿಲ್ಲಾ,ತಾಲೂಕು ಕೇಂದ್ರದಲ್ಲಿ ತಪಾಸಣೆ ನಡೆಯಲಿದೆ.ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸುವಂತೆ ಸೂಚಿಸಿದ್ದೇವೆ ಎಂದು ಅವರು ತಿಳಿಸಿದರು. 

ಶಾಸಕರು ಅವರವರ ಕ್ಷೇತ್ರದಲ್ಲೇ ಕೋವಿಡ್ ಟೆಸ್ಟ್ ಮಾಡಿಸಬಹುದು, ಬೇರೆಯವರಿಗೆ ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಇನ್ನು ಸಿಬ್ಬಂದಿಗಳಿಗೆ ಸೆ.18 ರಂದು ಕೊರೊನಾ ಪರೀಕ್ಷೆಯನ್ನು ವಿಧಾನಸೌಧದಲ್ಲಿಯೇ ಮಾಡಿಸಲು ವ್ಯವಸ್ಥೆ ಮಾಡಲಾಗಿದೆ

ಕಲಾಪದ ಅವಧಿಯಲ್ಲಿ ಯಾವ ಬದಲಾವಣೆ ಇಲ್ಲ. ವಿಧಾನಮಂಡಲದಲ್ಲಿ ಸೀಟಿನ ಮಧ್ಯೆ ಪಾರದರ್ಶಕ ಪ್ಲಾಸ್ಟಿಕ್ ಶೀಟ್ ಹಾಖಲಾಗಿದ್ದು ಅಧಿಕಾರಿಗಳು, ಮಾದ್ಯಮದವರು ಕೂರುವ ಸ್ಥಳದ ಬಗೆಗೆ ಇನ್ನೂ ತೀರ್ಮಾನವಾಗಿಲ್ಲ. ಅಧಿವೇಶನದ ವೇಳೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಊರು ದಿನಕ್ಕೆ ಮುನ್ನ ಸದಸ್ಯರು ಕೋವಿಡ್ ವರದಿ ನೀಡುವುಉದು ಕಡ್ಡಾಯ ಎಂದು ಕಾಗೇರಿ ಹೇಳಿದ್ದಾರೆ.

ಈ ಬಾರಿ ಎಂಟಿ ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ 31 ವಿಧೇಯಕಗಳು ಮಂಡನೆಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT