ನಟಿ ಸಂಜನಾ ಗುಲ್ರಾನಿ 
ರಾಜ್ಯ

ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ: ವಶಕ್ಕೆ ಪಡೆಯಲು ತೆರಳಿದ ಅಧಿಕಾರಿಗಳ ಮೇಲೆ ಎಗರಾಡಿದ ನಟಿ ಸಂಜನಾ

ನಾನೇಕೆ ನಿಮ್ಮೊಂದಿಗೆ ಬರಬೇಕು, ನೀವು ನನಗೆ ನೋಟಿಸ್ ನೀಡಿಲ್ಲ, ಏಕಾಏಕಿ ದಾಳಿ ನಡೆಸಿದ್ದೀರಿ? ನೇನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲು ಮುಂದಾದ ಸಿಸಿಬಿ ಪೊಲೀಸರ ಮೇಲೆ ನಟಿ ಸಂಜನಾ ಗುಲ್ರಾನಿಯವರು ಕೂಗಾಡಿ ರಂಪಾಟ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು: ನಾನೇಕೆ ನಿಮ್ಮೊಂದಿಗೆ ಬರಬೇಕು, ನೀವು ನನಗೆ ನೋಟಿಸ್ ನೀಡಿಲ್ಲ, ಏಕಾಏಕಿ ದಾಳಿ ನಡೆಸಿದ್ದೀರಿ? ನೇನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲು ಮುಂದಾದ ಸಿಸಿಬಿ ಪೊಲೀಸರ ಮೇಲೆ ನಟಿ ಸಂಜನಾ ಗುಲ್ರಾನಿಯವರು ಕೂಗಾಡಿ ರಂಪಾಟ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಇಂದು ಬೆಳಿಗ್ಗೆಯಷ್ಟೇ ಇಂದಿರಾನಗರದಲ್ಲಿರುವ ಸಂಜನಾ ಅವರ ಮನೆ ಮೇಲೆ ಸಿಸಿಬಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸಿದ್ದಾರೆ. 

ಸಿಸಿಬಿ ದಾಳಿ ವೇಳೆ ನಟಿ ಸಂಜನಾ ಮನೆಯಲ್ಲಿ ಮಲಗಿದ್ದು, ನಿದ್ರೆಯಿಂದ ಎದ್ದಿರಲಿಲ್ಲ. ಸಿಸಿಬಿ ಪೊಲೀಸರು ಮನೆಯ ಬಳಿ ಬಂದ ಸಂದರ್ಭದಲ್ಲಿ ಸಂಜನಾ ತಾಯಿ ಬಾಗಿಲು ತೆಗೆದಿದ್ದಾರೆ. ನಂತರ ನೋಟಿಸ್ ತೋರಿಸಿದ ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಮಲಗಿದ್ದ ಸಂಜನಾ ಅವರಿಗೆ ವಿಚಾರವನ್ನು ತಿಳಿಸಿ, ತನಿಖೆಗೆ ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಸಂಜನಾ ಅವರನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 

ಈ ವೇಳೆ ಕೂಗಾಡಿರುವ ಸಂಜನಾ ಅವರು, ಮನೆಯಲ್ಲಿ ಏನೂ ಸಿಗದೇ ಇದ್ದರೂ ನನ್ನನ್ನು ವಶಕ್ಕೆ ಪಡೆಯುತ್ತಿದ್ದೀರಿ. ನಾನೇಕೆ ನಿಮ್ಮೊಂದಿಗೆ ಬರಬೇಕು. ನನಗೆ ನೀವು ನೋಟಿಸ್ ಕೊಟ್ಟಿಲ್ಲ. ಏಕಾಏಕಿ ದಾಳಿ ನಡೆಸಿದ್ದೀರಿ. ನಾನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ರಂಪಾಟ ಮಾಡಿದ್ದಾರೆಂದು ತಿಳಿದುಬಂದಿದೆ. 

ಸಂಜಾನ ಅವರು ತೀವ್ರವಾಗಿ ಕೂಗಾಡುತ್ತಿದ್ದಂತೆಯೇ ಅಧಿಕಾರಿಗಳು, ನೀವೀಗ ನಮ್ಮ ವಶದಲ್ಲಿದ್ದೀರಿ. ಹೀಗಾಗಿ ನಾವು ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ನಾವು ಹೇಳಿದ್ದನ್ನು ನೀವು ಕೇಳಬೇಕು. ಸರ್ಜ್ ವಾರೆಂಟ್ ಸಂದರ್ಭದಲ್ಲಿ ವಿರೋಧ ಮಾಡಿದರೆ ನಿಮಗೇ ಕಷ್ಟವಾಗುತ್ತದೆ ಎಂದು ಹೇಳಿ, ಸಂಜನಾ ಅವರನ್ನು ತಣ್ಣಗಾಗುವಂತೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. 

ಇನ್ನು ಸಂಜನಾ ಅವರನ್ನು ಇದೀಗ ವಶಕ್ಕೆ ಪಡೆದಿರುವ ಪೊಲೀಸರು, ಸಂಜನಾ ಅವರ ಮೊಬೈಲ್, ಪರ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT